ಉಗ್ರ ಸಂಚಿನ ಹಿಂದೆ ಪಾಕ್‌ ಕೈವಾಡ ಸ್ಪಷ್ಟ 


Team Udayavani, Sep 16, 2021, 7:30 AM IST

ಉಗ್ರ ಸಂಚಿನ ಹಿಂದೆ ಪಾಕ್‌ ಕೈವಾಡ ಸ್ಪಷ್ಟ 

ಹೊಸದಿಲ್ಲಿ: ಭಾರತದಲ್ಲಿ ನವರಾತ್ರಿ, ರಾಮ್‌ಲೀಲಾ ಸಂದರ್ಭದಲ್ಲಿ ಅತಿದೊಡ್ಡ ವಿಧ್ವಂಸಕ ಕೃತ್ಯದ ಸಂಚಿನ ಹಿಂದೆ ಪಾಕಿಸ್ಥಾನದ ಕೈವಾಡವಿರುವುದು ಸ್ಪಷ್ಟವಾಗಿದೆ.

ಮಂಗಳವಾರ ಮೂರು ರಾಜ್ಯಗಳಲ್ಲಿ ನಡೆದ ಕ್ಷಿಪ್ರ ಕಾರ್ಯಾಚರಣೆ ಯಲ್ಲಿ 6 ಉಗ್ರರು ಬಂಧಿತರಾದ ಬೆನ್ನಲ್ಲೇ ಈ ವಿಚಾರ ಬೆಳಕಿಗೆ ಬಂದಿದೆ.

ಉಗ್ರರನ್ನು ಬಂಧಿಸುವ ವೇಳೆ ವಶಪಡಿಸಿ ಕೊಳ್ಳಲಾದ ಶಸ್ತ್ರಾಸ್ತ್ರಗಳು ಮತ್ತು ಪಂಜಾಬ್‌ನ ಗಡಿ ನಿಯಂತ್ರಣ ರೇಖೆಯ ಸಮೀಪ ಡ್ರೋನ್‌ಗಳು ಕೆಳಕ್ಕೆ ಹಾಕಿ ಹೋಗಿದ್ದ ಶಸ್ತ್ರಾಸ್ತ್ರಗಳಿಗೂ ಸಾಮ್ಯತೆ ಕಂಡುಬಂದಿದೆ. ಅಂದರೆ ಡ್ರೋನ್‌ ಮೂಲಕ ಪಾಕ್‌ ಕಳುಹಿಸುತ್ತಿದ್ದ ಶಸ್ತ್ರಾಸ್ತ್ರಗಳನ್ನೇ ದೇಶದಲ್ಲಿ ಉಗ್ರ ಕೃತ್ಯ ಎಸಗಲು ಉದ್ದೇಶಿಸಿದ ಈ ಉಗ್ರರೂ ಬಳಸಲು ಮುಂದಾಗಿರುವುದು ಪಾಕ್‌ ಬಣ್ಣವನ್ನು ಬಯಲು ಮಾಡಿದೆ. ಈ ಹಿಂದೆ ಪಂಜಾಬ್‌ನ ಗಡಿ ರೇಖೆಯ ಸಮೀಪವೇ ಡ್ರೋನ್‌ ಮೂಲಕ ಕೆಳಗಿಳಿಸಿ ಹೋಗಿದ್ದ ಟಿಫಿನ್‌ ಬಾಂಬ್‌ಗಳು, ಗ್ರೆನೇಡ್‌ಗಳು, 100 ಪಿಸ್ತೂಲು ಕಾಟ್ರಿಜ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

14 ದಿನ ಪೊಲೀಸ್‌ ವಶಕ್ಕೆ:

ಇದೇ ವೇಳೆ ಉತ್ತರಪ್ರದೇಶ, ದಿಲ್ಲಿ, ಮಹಾ ರಾಷ್ಟ್ರಗಳಲ್ಲಿನ ಕಾರ್ಯಾಚರಣೆ ಯಲ್ಲಿ ಬಂಧಿತರಾದ ಜಾನ್‌ ಮೊಹಮ್ಮದ್‌ ಶೇಖ್‌, ಒಸಾಮ, ಮೂಲ್‌ಚಂದ್‌, ಝೀಶಾನ್‌ ಖಮರ್‌, ಮೊಹಮ್ಮದ್‌ ಅಬೂ ಬಕ್ಕರ್‌ ಮತ್ತು ಮೊಹಮ್ಮದ್‌ ಅಮೀರ್‌ ಜಾವೇದ್‌ನನ್ನು ಬುಧವಾರ ದಿಲ್ಲಿ ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು ಎಲ್ಲರನ್ನೂ 14 ದಿನಗಳ ಕಾಲ ಪೊಲೀಸ್‌ ವಶಕ್ಕೊಪ್ಪಿಸಿದೆ.

ಟ್ರಾವೆಲ್‌ ಏಜೆಂಟ್‌ ವಶಕ್ಕೆ:

6 ಉಗ್ರರನ್ನು ಬಂಧಿಸಿದ ಬೆನ್ನಲ್ಲೇ ಪೊಲೀಸರು ಬುಧವಾರ ಮುಂಬಯಿ ಯಲ್ಲಿ ಟ್ರಾವೆಲ್‌ ಏಜೆಂಟ್‌ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಸೆ. 13ರಂದು ಇದೇ ಏಜೆಂಟ್‌ ಈ ಉಗ್ರರಿಗೆ ರೈಲ್ವೇ ಟಿಕೆಟ್‌ ಬುಕ್‌ ಮಾಡಿ ಕೊಟ್ಟಿದ್ದ ಎನ್ನಲಾಗಿದೆ. ಇದೇ ವೇಳೆ ಶಂಕಿತ ಉಗ್ರ ಜಾನ್‌ ಮೊಹಮ್ಮದ್‌ ಶೇಖ್‌ ಎಂಬಾತನ ಕುಟುಂಬದ ಸದಸ್ಯರನ್ನು ಬುಧವಾರ ಮುಂಬಯಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಗರಿಷ್ಠ ಪ್ರಾಣಹಾನಿಗೆ ಪಾಕ್‌  ಸೇನೆಯಿಂದಲೇ ತರಬೇತಿ! :

ಬಂಧಿತ 6 ಉಗ್ರರ ಪೈಕಿ ಪಾಕ್‌ನಲ್ಲಿ ತರಬೇತಿ ಪಡೆದ ಇಬ್ಬರಿಗೆ ಕರಾಚಿಯ ಹೊರವಲಯದಲ್ಲಿ ಪಾಕ್‌ ಸೇನಾ ಸಿಬಂದಿಯೇ “ಉಗ್ರ ತರಬೇತಿ’ ನೀಡಿದ್ದರು. ಭಾರತದಲ್ಲಿ “ನವರಾತ್ರಿಯ ಸಮಯ ದಲ್ಲಿ ಮಾಡುವ ಸ್ಫೋಟ’ದಲ್ಲಿ ಗರಿಷ್ಠ ಪ್ರಾಣಹಾನಿ ಆಗುವಂತೆ ನೋಡಿಕೊಳ್ಳುವುದು ಹೇಗೆ ಎಂಬ ಬಗ್ಗೆಯೂ ಕಲಿಸಿಕೊಡಲಾಗಿತ್ತು.

ಉಗ್ರರ ತಂಡವು ಮೊದಲು ಮಾನ್ಯತೆ ಪಡೆದ ವೀಸಾ ಮೂಲಕ ಮಸ್ಕತ್‌ಗೆ ತೆರಳಿ 10 ದಿನ ಕ್ವಾರಂಟೈನ್‌ಗೆ ಒಳಗಾಗಿದ್ದರು. ಅಲ್ಲಿಂದ ಸಮುದ್ರ ಮಾರ್ಗದಲ್ಲಿ ಇರಾನ್‌ಗೆ ತೆರಳಿದ್ದರು. ಇರಾನ್‌ನಿಂದ ಹಡಗಿನ ಮೂಲಕ ಕರಾಚಿಗೆ ಪ್ರಯಾಣಿಸಿದ್ದರು. ಅಲ್ಲಿ ಪಾಕ್‌ ಸೇನೆಯ ಮೂವರು ಸಿಬಂದಿ, ಬಾಂಬ್‌-ಐಇಡಿ ತಯಾರಿಕೆ,

ಮ್ಯಾಪ್‌ ಓದುವುದು, ದೈನಂದಿನ ಬಳಕೆಯ ವಸ್ತು

ಗಳನ್ನು ಬಳಸಿ ಸ್ಫೋಟಕ ತಯಾರಿಸುವುದು, ಬಾಂಬ್‌ ಸ್ಫೋಟಿಸಿ ಗರಿಷ್ಠ ಹಾನಿ ಉಂಟುಮಾಡುವುದು ಇತ್ಯಾದಿ ವಿಚಾರಗಳ ಕುರಿತು ತರಬೇತಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ನಿಮ್ಮಿಂದ ಪಾಠ ಕಲಿಯಬೇಕಿಲ್ಲ’ :

“ಒಂದು ವಿಫ‌ಲ ದೇಶದಿಂದ ಪಾಠ ಕಲಿಯುವ ಅಗತ್ಯ ನಮಗಿಲ್ಲ.’ ಇದು ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿಯಲ್ಲಿ ಕಾಶ್ಮೀರ ವಿಚಾರದಲ್ಲಿ ಮೂಗು ತೂರಿಸಿದ ಪಾಕಿಸ್ಥಾನಕ್ಕೆ ಭಾರತ ನೀಡಿರುವ ಖಡಕ್‌ ಉತ್ತರ.

ಕಾಶ್ಮೀರ ವಿಚಾರ ಪ್ರಸ್ತಾವಿಸಿದ್ದ ಪಾಕ್‌ಗೆ ತಿರುಗೇಟು ನೀಡಿರುವ ಭಾರತದ ರಾಜತಾಂತ್ರಿಕ ಅಧಿಕಾರಿ ಪವನ್‌ ಬಾಧೆ, “ಪಾಕಿಸ್ಥಾನವು ಭಯೋ ತ್ಪಾದನೆಯ ಕೇಂದ್ರಬಿಂದು ಮತ್ತು ಒಂದು ವಿಫ‌ಲ ದೇಶ ಎಂಬುದು ಜಗತ್ತಿಗೇ ಗೊತ್ತು. ಉಗ್ರರನ್ನು ಪೋಷಿಸುತ್ತಾ ಬಂದಿರುವ ನಿಮ್ಮಂಥವರಿಂದ ಪಾಠ ಕಲಿಯಬೇಕಾದ ಅಗತ್ಯ ನಮಗಿಲ್ಲ’ ಎಂದಿದ್ದಾರೆ.

ಟಾಪ್ ನ್ಯೂಸ್

1-wewqewewq

H.D. Revanna;ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್: ದೇವೇಗೌಡರ ನಿವಾಸಕ್ಕೆ ಎಸ್ ಐಟಿ !

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewewq

H.D. Revanna;ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್: ದೇವೇಗೌಡರ ನಿವಾಸಕ್ಕೆ ಎಸ್ ಐಟಿ !

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.