ಆತ್ಮಾಹುತಿ ದಾಳಿಗೆ ಸಂಚು : ದೆಹಲಿಯಲ್ಲಿ ಶಂಕಿತ ಐಸಿಸ್ ಉಗ್ರ ದಂಪತಿ ಬಂಧನ
Team Udayavani, Mar 8, 2020, 8:18 PM IST
ನವದೆಹಲಿ: ದೇಶದಲ್ಲಿ ಆತ್ಮಾಹುತಿ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಐಸಿಸ್ ಉಗ್ರ ದಂಪತಿಯನ್ನು ದೆಹಲಿ ಪೊಲೀಸರ ವಿಶೇಷ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿರುವ ಓಕ್ಲಾ ಪ್ರದೇಶದಿಂದ ಇವರಿಬ್ಬರನ್ನು ಬಂಧಿಸಲಾಗಿದ್ದು, ಬಂಧಿತರನ್ನು ಜಹನ್ ಝೆಬ್ ಸಮಿ ಮತ್ತು ಆತನ ಪತ್ನಿ ಹಿಂಡಾ ಬಶೀರ್ ಬೇಗ್ ಎಂದು ಗುರುತಿಸಲಾಗಿದೆ.
ಇಬ್ಬರೂ ಬಂಧಿತರು ಅಫ್ಘಾನಿಸ್ಥಾನದಲ್ಲಿದ್ದ ಐ.ಎಸ್.ಕೆ.ಪಿ. (ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಲೆವಂಟ್-ಖೊರಾಸಮ್) ಸಂಘಟನೆಯ ಹಲವು ಪ್ರಮುಖರೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.
ಮಾತ್ರವಲ್ಲದೇ ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮುಸ್ಲಿಂ ಯುವಕರನ್ನು ಪ್ರಚೋದಿಸಿ ಉಗ್ರದಾಳಿಗೆ ಸಂಚನ್ನು ರೂಪಿಸುತ್ತಿದ್ದರೆಂಬ ಆಘಾತಕಾರಿ ಮಾಹಿತಿಯನ್ನೂ ಸಹ ಪೊಲೀಸರು ಇದೇ ಸಂದರ್ಭದಲ್ಲಿ ಹೊರಗೆಡಹಿದ್ದಾರೆ. ಬಂಧಿತರಿಂದ ಉಗ್ರ ಕೃತ್ಯಕ್ಕೆ ಪ್ರೇರಣೆ ನೀಡುವ ಹಲವು ವಸ್ತುಗಳನ್ನು ಇದೇ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾಗಿದೆ.
ಈ ದಂಪತಿ ‘ಇಂಡಿಯನ್ ಮುಸ್ಲಿಂ ಯನೈಟ್’ ಎಂಬ ಹೆಸರಿನ ಫೇಸ್ಬುಕ್ ಪುಟವೊಂದನ್ನೂ ಸಹ ನಡೆಸುತ್ತಿದ್ದರು ಮತ್ತು ಈ ಸಾಮಾಜಿಕ ಜಾಲತಾಣ ವೇದಿಕೆ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ, ಎನ್.ಆರ್.ಸಿ. ಹಾಗೂ ಎನ್.ಪಿ.ಎ. ವಿರುದ್ದ ಹೆಚ್ಚೆಚ್ಚು ಜನರನ್ನು ಒಗ್ಗೂಡಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ವರದಿಯನ್ನು ದೆಹಲಿಯ ಉಪ ಪೊಲೀಸ್ ಕಮಿಷನರ್ ಪ್ರಮೋದ್ ಸಿಂಗ್ ಕುಶ್ವಾಹ ಅವರು ಖಚಿತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ