ಕೋವಿಡ್ 19; ಐಸಿಸ್ ನಿಂದ ಆನ್ ಲೈನ್ ಮೂಲಕ ಉಗ್ರರ ನೇಮಕಾತಿ; ಭದ್ರತಾ ಸಂಸ್ಥೆ

ಸ್ಮಾರ್ಟ್ ಫೋನ್ ಮತ್ತು ಕಂಪ್ಯೂಟರ್ ಬಳಕೆ ವೇಳೆ ವಹಿಸಬೇಕಾದ ಎಚ್ಚರಿಕೆ ಬಗ್ಗೆ ಐಸಿಸ್ ಹೇಗೆ ತಂತ್ರಗಾರಿಕೆ ಹೆಣೆದಿದೆ

Team Udayavani, Jul 10, 2020, 10:10 AM IST

ಕೋವಿಡ್ 19; ಐಸಿಸ್ ನಿಂದ ಆನ್ ಲೈನ್ ಮೂಲಕ ಉಗ್ರರ ನೇಮಕಾತಿ; ಭದ್ರತಾ ಸಂಸ್ಥೆ

ನವದೆಹಲಿ:ಭಾರತ ಸೇರಿದಂತೆ ಜಗತ್ತಿನಾದ್ಯಂತ ಕೋವಿಡ್ 19 ವೈರಸ್ ಅಟ್ಟಹಾಸ ಮುಂದುವರಿದಿದ್ದು, ಮತ್ತೊಂದೆಡೆ ಐಸಿಸ್ ಉಗ್ರಗಾಮಿ ಸಂಘಟನೆ ತನ್ನ ಬಲ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಆನ್ ಲೈನ್ ಮೂಲಕ ಉಗ್ರರನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿರುವ ಬಗ್ಗೆ ಭಾರತೀಯ ಭದ್ರತಾ ಏಜೆನ್ಸಿ ಕಳವಳ
ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಅವೆಲ್ಲಕ್ಕಿಂತ ಹೆಚ್ಚಾಗಿ ಅಂತರ್ಜಾಲ ಬಳಸುವಾಗ ಭದ್ರತಾ ಸಂಸ್ಥೆಗಳ ರೇಡಾರ್ ಅನ್ನು ಹೇಗೆ ತಪ್ಪಿಸಿಕೊಳ್ಳಬೇಕು ಎಂಬ ಬಗ್ಗೆ ಐಸಿಸ್ ಸಂಘಟನೆಯಲ್ಲಿರುವ ಉಗ್ರರಿಗೆ ಮಾಹಿತಿ ನೀಡುತ್ತಿರುವುದಾಗಿಯೂ ವರದಿ ಹೇಳಿದೆ.

ಈ ಬಗ್ಗೆ ಸೈಬರ್ ಸೆಕ್ಯೂರಿಟಿ ಮ್ಯಾಗಜೀನ್ ನಲ್ಲಿ “ದ ಸಪೋರ್ಟರ್ಸ್ ಸೆಕ್ಯೂರಿಟಿ” ಲಿಂಕ್ ಟು ಐಸಿಸ್ ಹೆಸರಿನಲ್ಲಿ ಪ್ರಕಟವಾದ ಲೇಖನದಲ್ಲಿ ವಿವರವಾದ ಮಾಹಿತಿ ನೀಡಲಾಗಿದೆ. ಸಾಮಾಜಿಕ ಜಾಲತಾಣ ಉಪಯೋಗಿಸುವಾಗಲೂ ಭದ್ರತಾ ಸಂಸ್ಥೆಯ ಕಣ್ಗಾವಲಿನಿಂದ ತಪ್ಪಿಸಿಕೊಳ್ಳುವುದು ಹೇಗೆ ಎಂಬ ಎಚ್ಚರಿಕೆ ನೀಡುತ್ತಿರುವುದಾಗಿಯೂ ವಿವರಿಸಿದೆ.

ಸ್ಮಾರ್ಟ್ ಫೋನ್ ಮತ್ತು ಕಂಪ್ಯೂಟರ್ ಬಳಕೆ ವೇಳೆ ವಹಿಸಬೇಕಾದ ಎಚ್ಚರಿಕೆ ಬಗ್ಗೆ ಐಸಿಸ್ ಹೇಗೆ ತಂತ್ರಗಾರಿಕೆ ಹೆಣೆದಿದೆ ಎಂಬುದನ್ನು 24 ಪುಟಗಳ ಮ್ಯಾಗಜಿನ್ ನಲ್ಲಿ ವಿವರಿಸಿರುವುದಾಗಿ ವರದಿ ತಿಳಿಸಿದೆ. ಈ ಲೇಖನ ಪ್ರಕಟವಾದ ನಂತರ ಭಯೋತ್ಪಾದಕ ಸಂಘಟನೆಯ ಆನ್ ಲೈನ್ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಭದ್ರತಾ ಏಜೆನ್ಸಿ ತಿಳಿಸಿದೆ.

ತಜ್ಞರ ಪ್ರಕಾರ, ವಿಶೇಷ ವಿಡಿಯೋ ಗೇಮ್ ಗಳ ಮೂಲಕ ಜಿಹಾದ್ ಹರಡಿಸುವ ಐಸಿಸ್ ಸಂಚು ಭದ್ರತಾ ಏಜೆನ್ಸಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. 2020ರ ಆರಂಭದಲ್ಲಿ ಬಾಂಗ್ಲಾದೇಶದಿಂದ ಕಾರ್ಯಾಚರಿಸುತ್ತಿರುವ ಅಲ್ ಖೈದಾ ಸಂಘಟನೆ ಕೂಡಾ ತನ್ನ ವೆಬ್ ಸೈಟ್ ಮೂಲಕ ಭಾರತದಲ್ಲಿ ಒಂಟಿ ತೋಳ (ಏಕಾಂಗಿ) ದಾಳಿ ನಡೆಸುವ ಬೆದರಿಕೆ ಒಡ್ಡಿತ್ತು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.