ಇಸ್ರೋ ಸಾಧನೆ: ಚಂದ್ರಯಾನಕ್ಕೆ ವಾಹನ ರೆಡಿ


Team Udayavani, Jun 6, 2017, 3:45 AM IST

yana.jpg

ಶ್ರೀಹರಿಕೋಟ: ದೇಶಿ ನಿರ್ಮಿತ ಜಿಎಸ್‌ಎಲ್‌ವಿ ಮಾರ್ಕ್‌-3 ಡಿ1 ರಾಕೆಟ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ. ಈ ಮೂಲಕ ಹೊಸ ಇತಿಹಾಸ ನಿರ್ಮಿಸಿದ ಭಾರತ, ಮಂಗಳ ಮತ್ತು ಚಂದ್ರನ ಅಂಗಳಕ್ಕೆ ಮಾನವನನ್ನು ಕಳುಹಿಸಿಕೊಡುವ, ಮುಂದಿನ ತಲೆಮಾರಿನ ಉಪಗ್ರಹ ಉಡಾವಣೆಯನ್ನು ತನ್ನದೇ ನೆಲದಿಂದ ಮಾಡಲು ದಾರಿ ಸುಗಮ ಮಾಡಿಕೊಂಡಿದೆ.

ಸೋಮವಾರ ಆಂಧ್ರಪ್ರದೇಶದ ಸತೀಶ್‌ ಧವನ್‌ ಬಾಹ್ಯಾಕಾಶ ಉಡ್ಡಯನ ಕೇಂದ್ರದಿಂದ ನಿಗದಿತ ಸಮಯ ಸಂಜೆ 5.28ಕ್ಕೆ ಉಪಗ್ರಹವನ್ನು ನಭಕ್ಕೆ ಚಿಮ್ಮಿಸಲಾಯಿತು.

ಇದರೊಂದಿಗೆ ಚಂದಿರನಲ್ಲಿಗೆ ಮಾನವ ಸಹಿತ ಪಯಣ ಬೆಳೆಸುವ ಭಾರತದ ದೊಡ್ಡ ಕನಸು ಚಂದ್ರಯಾನ-2 ಯೋಜನೆ ಮತ್ತೂಂದು ಮಜಲು ಮುಟ್ಟಿದೆ. ಈ ಯೋಜನೆಗೆ ಅಗತ್ಯ ಬೀಳುವ 12,500 ಕೋಟಿ ರೂ. ಬೇಡಿಕೆಯನ್ನು ಈಗಾಗಲೇ ಇಸ್ರೋ ಕೇಂದ್ರ ಸರಕಾರದ ಮುಂದಿ ಟ್ಟಿದ್ದು, ಅದು ಅನುಮೋದನೆಗೊಂಡಲ್ಲಿ ಏಳು ವರ್ಷಗಳಲ್ಲಿ ಭಾರತದ ಕನಸು ನನಸಾಗಲಿದೆ ಎಂದು ಇಸ್ರೋ ಮೂಲಗಳು ತಿಳಿಸಿವೆ.

ಇದಕ್ಕಾಗಿ 2000ದಲ್ಲಿಯೇ ರಾಕೆಟ್‌ ಅಭಿವೃದ್ಧಿ ಕಾರ್ಯ ಆರಂಭಗೊಂಡಿತ್ತಾದರೂ, ಅಮೆರಿಕ ಭಾರತದ ಮೇಲೆ ಹೇರಿದ್ದ ದಿಗ್ಬಂಧನ ದಿಂದಾಗಿ ಉಡ್ಡಯನ ಕೈಗೂಡಲು ಇಷ್ಟು ವರ್ಷ ಕಾಯ ಬೇಕಾಯಿತು. 300 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ 4,000 ಕೆ.ಜಿ. ಭಾರ ಹೊತ್ತೂ ಯ್ಯಬಲ್ಲ 43.43 ಮೀ. ಎತ್ತರ, 640 ಟನ್‌ ಭಾರದ ರಾಕೆಟ್‌ ಸೋಮವಾರ ಸಂಜೆ 3,136 ಕೆ.ಜಿ. ತೂಕದ ಸಂವಹನ ಉಪಗ್ರಹ ಜಿಸ್ಯಾಟ್‌-19 ಹೊತ್ತು ಬಾಹ್ಯಾಕಾಶಕ್ಕೆ ಸಾಗಿದಾಗ ವಿಜ್ಞಾನಿಗಳ ಸಂಭ್ರಮವೂ ಆಕಾಶ ಮುಟ್ಟಿತ್ತು. ಮಾರ್ಕ್‌-3 ರಾಕೆಟ್‌ 16 ನಿಮಿಷಗಳಲ್ಲಿ ಉಪಗ್ರಹವನ್ನು ಕಕ್ಷೆಯ ಪಥ ಸೇರಿಸಿತು ಎಂದು ಇಸ್ರೋ ತಿಳಿಸಿದೆ. 

ಇದೊಂದು ಐತಿಹಾಸಿಕ ದಿನ. ಜಿಎಸ್‌ಎಲ್‌ವಿ ಮಾರ್ಕ್‌-3 ಡಿ1 ರಾಕೆಟ್‌ ಉಡಾವಣೆ ಮಾಡುವಲ್ಲಿ ನಮ್ಮ ತಂಡ ಯಶಸ್ವಿಯಾಗಿದೆ. ಮೊದಲ ಪ್ರಯತ್ನದಲ್ಲೇ ಯಶಸ್ವಿ ಯಾಗಿರುವುದು ದೊಡ್ಡ ಸಾಧನೆ.
– ಎ.ಎಸ್‌. ಕಿರಣ್‌ ಕುಮಾರ್‌, ಇಸ್ರೋ ಅಧ್ಯಕ್ಷ

ಇಸ್ರೋ ಸಾಧನೆ ದೇಶವೇ ಹೆಮ್ಮೆ ಪಡುವಂಥದ್ದು. ಇಸ್ರೋ ತಂಡ ಇನ್ನಷ್ಟು ಸಾಧನೆ ಮಾಡುವ ವಿಶ್ವಾಸ ವಿದೆ. ಇದಕ್ಕೆ ಕಾರಣರಾಗಿರುವ ವಿಜ್ಞಾನಿಗಳು, ಎಂಜಿನಿಯರ್‌ಗಳು, ತಂತ್ರಜ್ಞರಿಗೆ ಅಭಿನಂದನೆ.
– ಪ್ರಣವ್‌ ಮುಖರ್ಜಿ,  ರಾಷ್ಟ್ರಪತಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋದ ಯಶಸ್ಸು ವಿಶ್ವವೇ ಭಾರತದತ್ತ ಮುಖಮಾಡುವಂತೆ ಮಾಡಿದೆ. ಭಾರತ ಹೆಮ್ಮೆ ಪಡುವಂತೆ ಮಾಡಿದ, ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಅಭಿನಂದನೆ.
– ನರೇಂದ್ರ ಮೋದಿ, ಪ್ರಧಾನಮಂತ್ರಿ

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.