ಇಸ್ರೋ ವಿಶ್ವದಾಖಲೆ, ಏಕಕಾಲಕ್ಕೆ 104 ಉಪಗ್ರಹಗಳ ಉಡ್ಡಯನ


Team Udayavani, Feb 16, 2017, 3:45 AM IST

isro.jpg

ಶ್ರೀಹರಿಕೋಟಾ: ಅತೀ ಕಡಿಮೆ ಖರ್ಚಿನಲ್ಲಿ ಬಾಹ್ಯಾಕಾಶಕ್ಕೆ ಉಪಗ್ರಹಗಳನ್ನು ಹಾರಿಬಿಡುವ ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ) ನಭದಲ್ಲಿ ಇನ್ನೊಂದು ಅಳಿಸಲಾರದ ಋಜು ಬರೆದಿದೆ. ಬುಧವಾರ ಒಂದೇ ರಾಕೆಟಿನಲ್ಲಿ ಬರೋಬ್ಬರಿ 104 ಉಪಗ್ರಹಗಳನ್ನು ನಭಕ್ಕೆ ಚಿಮ್ಮಿಸುವ ಮೂಲಕ ನಮ್ಮ ವಿಜ್ಞಾನಿಗಳು ಹೊಸದೊಂದು ಇತಿಹಾಸವನ್ನು ಬರೆದಿದ್ದಾರೆ.

ಇಸ್ರೋದ ಅತಿ ನೆಚ್ಚಿನ ಪಿಎಸ್‌ಎಲ್‌ವಿ ಸಿ-37 ಬಾಹ್ಯಾಕಾಶ ನೌಕೆಯು ಬುಧವಾರ ಬೆಳಗ್ಗೆ 9.28ಕ್ಕೆ ಸರಿಯಾಗಿ 1,378 ಕೆ.ಜಿ. ತೂಕದ 104 ಉಪಗ್ರಹಗಳನ್ನು ಹೊತ್ತು ಬಾಹ್ಯಾಕಾಶದತ್ತ ಪಯಣ ಬೆಳೆಸಿತು. ಇದಾದ ಕೆಲವೇ ಸಮಯದಲ್ಲಿ ಎಲ್ಲ ಉಪಗ್ರಹಗಳನ್ನೂ ಕಕ್ಷೆಗೆ ಸೇರಿಸುವಲ್ಲಿ ಅದು ಯಶಸ್ವಿಯಾಯಿತು. ಇದು ಪಿಎಸ್‌ಎಲ್‌ವಿಯ 38ನೇ ಯಶಸ್ವಿ ಉಡ್ಡಯನವಾಗಿದ್ದು, ಭಾರತದ ಹವಾಮಾನ ಪರಿವೀಕ್ಷಣ ಉಪಗ್ರಹ ಕಾಟೋìಸ್ಯಾಟ್‌-2 ಸರಣಿ ಹಾಗೂ 103 ಇತರ ನ್ಯಾನೋ ಉಪಗ್ರಹಗಳನ್ನು ಕೇವಲ 30 ನಿಮಿಷಗಳ ಅಂತರದಲ್ಲಿ ಕಕ್ಷೆಗೆ ಸೇರಿಸಿತು. ಈ ಮೂಲಕ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದ ಸುತ್ತ ಜಗತ್ತಿನ ಕೆಮರಾಗಳು ತಿರುಗುವಂತೆ ಮಾಡಿತು. ಇದೇ ಮೊದಲ ಬಾರಿಗೆ ಭಾರತದ ನ್ಯಾನೋ ಉಪಗ್ರಹಗಳೂ ಕಕ್ಷೆ ಸೇರಿರುವುದು ಸ್ಮರಣೀಯ ಹೆಜ್ಜೆಯಾಗಿದೆ.

ದೊಡ್ಡ ಸಾಧನೆಯೆಂದೇ ಪರಿಗಣಿತವಾಗಿದ್ದ ಈ ಉಡ್ಡಯನವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಇಸ್ರೋವು 2014ರಲ್ಲಿ ರಷ್ಯಾ ಬರೆದಿದ್ದ ದಾಖಲೆಯನ್ನು ಮುರಿದಿದೆ. ಆಗ ರಷ್ಯಾವು 37 ಉಪಗ್ರಹಗಳನ್ನು ಒಂದೇ ರಾಕೆಟ್‌ನಲ್ಲಿ ಏಕಕಾಲಕ್ಕೆ ಉಡ್ಡಯನ ಮಾಡುವ ಮೂಲಕ ದಾಖಲೆ ಸೃಷ್ಟಿಸಿತ್ತು. 

ಮೋದಿ ಅಭಿನಂದನೆ 
ಇಸ್ರೋ ವಿಜ್ಞಾನಿಗಳ ಈ ಮಹತ್ವದ ಸಾಧನೆಯನ್ನು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ಗಣ್ಯರು ಸ್ವಾಗತಿಸಿದ್ದಾರೆ. ನಮ್ಮ ದೇಶಕ್ಕೆ ಇದೊಂದು ಹೆಮ್ಮೆಯ ಸಂಗತಿ. ನಮ್ಮ ಬಾಹ್ಯಾಕಾಶ ವಿಜ್ಞಾನಿಗಳು ಇನ್ನೊಂದು ಐತಿಹಾಸಿಕ ಹೆಜ್ಜೆಯನ್ನಿಟ್ಟಿದ್ದಾರೆ. ಇಡೀ ದೇಶ ಅವರಿಗೆ ಸೆಲ್ಯೂಟ್‌ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಒಟ್ಟು  ಎಷ್ಟು ಉಪಗ್ರಹ?
ಭಾರತದ ಕಾಟೋìಸ್ಯಾಟ್‌- 2 ಮತ್ತು 2 ನ್ಯಾನೋ ಉಪಗ್ರಹ, ಅಮೆರಿಕದ 96 ಉಪಗ್ರಹಗಳು ಹಾಗೂ ಉಳಿದಂತೆ ಇಸ್ರೇಲ್‌, ಕಜಕಿಸ್ಥಾನ, ನೆದರ್ಲೆಂಡ್‌, ಸ್ವಿಟ್ಸರ್ಲಂಡ್‌, ಯುಎಇಯ ಉಪಗ್ರಹ ಗಳು ಪಿಎಸ್‌ಎಲ್‌ವಿ ಸಿ-37 ಮೂಲಕ ಕಕ್ಷೆ ಸೇರಿವೆ. 

ಉಡ್ಡಯನ ವಾಹಕ
ಪೋಲಾರ್‌ ಸ್ಯಾಟಲೈಟ್‌ ಲಾಂಚ್‌ ವೆಹಿಕಲ್‌ (ಪಿಎಸ್‌ಎಲ್‌ವಿ- ಸಿ37)

ವಾಹಕ ಎತ್ತರ :145 ಅಡಿ (44 ಮೀ.) 

ನಭ ಸೇರಿದ ಉಪಗ್ರಹಗಳು: ಒಟ್ಟು  104 

ಉಪಗ್ರಹಗಳ ಒಟ್ಟು ತೂಕ :1,378 ಕಿ.ಗ್ರಾಂ

ದಾಖಲೆ ಏಕೆ?
ಮೊದಲ ಬಾರಿಗೆ ಬೃಹತ್‌ ಸಂಖ್ಯೆಯಲ್ಲಿ ಉಪಗ್ರಹ ಉಡ್ಡಯನ 2014ರಲ್ಲಿ ರಷ್ಯಾ ಹಾರಿಬಿಟ್ಟಿದ್ದು ಕೇವಲ 39 ಉಪಗ್ರಹ
ಅದೇ ವರ್ಷ ಅಮೆರಿಕ ಹಾರಿಬಿಟ್ಟಿದ್ದು 32 ಉಪಗ್ರಹ 2016ರಲ್ಲಿ ಇಸ್ರೋ ಪಿಎಸ್‌ಎಲ್‌ ವಿ- ಸಿ34ನಿಂದ 20
ಉಪಗ್ರಹಗಳ ಉಡ್ಡಯನ ಇದೇ ಮೊದಲ ಬಾರಿಗೆ ಭಾರತದ 2 ನ್ಯಾನೋ ಉಪಗ್ರಹ ಉಡಾವಣೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.