ಇಸ್ರೋ ಹೊಸ ಮೈಲುಗಲ್ಲು; ವಾಣಿಜ್ಯ ಉಪಗ್ರಹ ಮಾರುಕಟ್ಟೆಗೆ ಪ್ರವೇಶ

36 ಉಪಗ್ರಹಗಳನ್ನು ಕಕ್ಷೆ ಸೇರಿಸಿದ ಎಲ್‌ವಿಎಂ3-ಎಂ2 ರಾಕೆಟ್‌

Team Udayavani, Oct 23, 2022, 7:30 PM IST

ಇಸ್ರೋ ಹೊಸ ಮೈಲುಗಲ್ಲು; ವಾಣಿಜ್ಯ ಉಪಗ್ರಹ ಮಾರುಕಟ್ಟೆಗೆ ಪ್ರವೇಶ

ನವದೆಹಲಿ/ಶ್ರೀಹರಿಕೋಟ: ವಾಣಿಜ್ಯ ಉಪಗ್ರಹ ಮಾರುಕಟ್ಟೆಗೆ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ ಪ್ರವೇಶ ಪಡೆದಿದೆ.

ಯುಕೆ ಮೂಲದ ಒನ್‌ವೆಬ್‌ ಸಂಸ್ಥೆಯ 36 ಬ್ರಾಡ್‌ಬ್ಯಾಂಡ್‌ ಸಂವಹನ ಉಪಗ್ರಹಗಳನ್ನು ಹೊತ್ತು ಇಸ್ರೋದ ಅತ್ಯಂತ ಭಾರವಾದ ರಾಕೆಟ್‌ ಎಲ್‌ವಿಎಂ3-ಎಂ2 ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಶನಿವಾರ ತಡರಾತ್ರಿ 12.07 ನಿಮಿಷಕ್ಕೆ ರಾಕೆಟ್‌ ಉಡಾವಣೆಯಾಗಿದ್ದು, ಈ ಮೂಲಕ ಇಸ್ರೋ ಹೊಸ ಇತಿಹಾಸ ಬರೆದಿದೆ.

ಚೊಚ್ಚಲ ವಾಣಿಜ್ಯ ಉಡಾವಣೆಯ ಜೊತೆಗೆ ಬರೋಬ್ಬರಿ 5,796 ಕೆಜಿ ತೂಕದ ಪೇಲೋಡ್‌ ಹೊತ್ತು ನಭಕ್ಕೆ ಚಿಮ್ಮಿದ ಭಾರತದ ಮೊದಲ ರಾಕೆಟ್‌ ಎಂಬ ಹೆಗ್ಗಳಿಕೆಯೂ ಎಲ್‌ವಿಎಂ3-ಎಂ2ಗೆ ಪ್ರಾಪ್ತಿಯಾಯಿತು.

ಎಲ್ಲ ಉಪಗ್ರಹಗಳನ್ನೂ ಬಾಹ್ಯಾಕಾಶ ನೌಕೆಯು ಭೂಮಿಯ ಕೆಳಕಕ್ಷೆಗೆ ಯಶಸ್ವಿಯಾಗಿ ಸೇರಿಸುತ್ತಿದ್ದಂತೆ, “ನಮಗೆ ದೀಪಾವಳಿ ಇಂದೇ ಆರಂಭವಾಯಿತು ಎಂದು ಇಸ್ರೋ ಮುಖ್ಯಸ್ಥ ಡಾ.ಎಸ್‌. ಸೋಮನಾಥ್‌ ಉದ್ಗರಿಸಿದ್ದಾರೆ. ಜತೆಗೆ, ಇದೊಂದು ಐತಿಹಾಸಿಕ ಯೋಜನೆಯಾಗಿದ್ದು, ಪ್ರಧಾನಿ ಮೋದಿ ಅವರ ಬೆಂಬಲದಿಂದಾಗಿ ಈ ಯೋಜನೆ ಯಶಸ್ವಿಯಾಯಿತು ಎಂದೂ ಹೇಳಿದ್ದಾರೆ.

ಅಭಿನಂದನೆಗಳ ಮಹಾಪೂರ:
ಮಹತ್ವದ ಮೈಲುಗಲ್ಲು ಸಾಧಿಸಿರುವ ಇಸ್ರೋ ವಿಜ್ಞಾನಿಗಳಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ದೇಶೀಯ ಸಾಮರ್ಥ್ಯಗಳನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾದ ನಮ್ಮ ವಿಜ್ಞಾನಿಗಳ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ ಎಂದು ಮುರ್ಮು ಟ್ವೀಟ್‌ ಮಾಡಿದ್ದಾರೆ.

ಭೂಸ್ವಾಧೀನ ಪೂರ್ಣ
ತಮಿಳುನಾಡಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರಾಕೆಟ್‌ ಉಡಾವಣಾ ವಲಯಕ್ಕಾಗಿ ಭೂಸ್ವಾಧೀನ ಕಾರ್ಯ ಪೂರ್ಣಗೊಂಡಿದೆ ಎಂದು ಇಸ್ರೋ ಮುಖ್ಯಸ್ಥರು ಭಾನುವಾರ ತಿಳಿಸಿದ್ದಾರೆ. ಶ್ರೀಹರಿಕೋಟದಿಂದ ಸುಮಾರು 650 ಕಿ.ಮೀ. ದೂರದಲ್ಲಿರುವ ತೂತುಕುಡಿ ಜಿಲ್ಲೆಯ ಕುಲಶೇಖರಪಟ್ಟಣಂನಲ್ಲಿ ಉಡಾವಣಾ ವಲಯ ರೂಪಿಸುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಇದೇ ವೇಳೆ, 2023ರೊಳಗಾಗಿ ಭಾರತದಾದ್ಯಂತ ಕನೆಕ್ಟಿವಿಟಿ ಕಲ್ಪಿಸುವಲ್ಲಿ ನಾವು ಬದ್ಧರಾಗಿದ್ದೇವೆ ಎಂದು ಲಂಡನ್‌ ಮೂಲಕ ಉಪಗ್ರಹ ಸಂವಹನ ಕಂಪನಿ ಒನ್‌ವೆಬ್‌ ಹೇಳಿದೆ.

 

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.