ನಿರ್ಮಾತೃ ಪತ್ತೆ ಕಷ್ಟ
Team Udayavani, Aug 30, 2019, 5:36 AM IST
ನವದೆಹಲಿ: ಅಯೋಧ್ಯೆಯಲ್ಲಿ ರಾಮಜನ್ಮಸ್ಥಳದಲ್ಲಿ ಬಾಬರ್ನ ಆಸ್ಥೆಯ ಮೇರೆಗೆ ಮಸೀದಿ ನಿರ್ಮಾಣವಾಯಿತೇ ಇಲ್ಲವೇ ಎಂಬುದು 500 ವರ್ಷಗಳಾದ ನಂತರ ಈಗ ಅದನ್ನು ಪರೀಕ್ಷಿಸಿ ಸತ್ಯಾಂಶ ಕಂಡುಹಿಡಿಯುವುದು ಕಷ್ಟದ ಕೆಲಸ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ರಾಮಜನ್ಮಭೂಮಿ ವಿಚಾರಣೆಯ 15ನೇ ದಿನವಾದ ಗುರುವಾರ, ತನ್ನ ವಕೀಲರ ಮೂಲಕ ವಾದ ಮಂಡಿಸಿರುವ ‘ಅಖೀಲ ಭಾರತೀಯ ಶ್ರೀರಾಮ ಜನ್ಮಭೂಮಿ ಪುನರುದ್ಧಾರ ಸಮಿತಿ’, ರಾಮನ ಜನ್ಮಸ್ಥಳದಲ್ಲಿ ಬಾಬರನು ಮಸೀದಿ ಕಟ್ಟಿದ್ದನೇ ಇಲ್ಲವೇ ಎಂಬುದನ್ನು ಪರೀಕ್ಷಿಸಲು ಈ ಹಿಂದೆ ಇದೇ ಪ್ರಕರಣದ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಹಾಗಾಗಿ, ಸುಪ್ರೀಂ ಕೋರ್ಟ್ ಈ ಕುರಿತಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಆದರೆ, 500 ವರ್ಷಗಳ ನಂತರ ಮಸೀದಿ ಯಾರು ಕಟ್ಟಿದರು ಎಂಬುದನ್ನು ಪತ್ತೆ ಮಾಡುವುದು ಕಷ್ಟದ ಕೆಲಸ ಎಂದು ಹೇಳಿತು. ಪ್ರಕರಣದಲ್ಲಿ ಸಹ ಕಕ್ಷಿದಾರರಾಗಿರುವ ಮುಸ್ಲಿಂ ಸಂಘಟನೆ ಯೊಂದು, ರಾಮಜನ್ಮಸ್ಥಳದಲ್ಲಿದ್ದ ಮಸೀದಿಯನ್ನು ಬಾಬರ್ ಕಟ್ಟಿರಲಿಲ್ಲ. ಹಾಗಾಗಿ, ಆತನಿಗೆ ಆ ಸ್ಥಳದ ಮೇಲೆ ಯಾವ ಹಕ್ಕೂ ಇರಲಿಲ್ಲ ಎಂದಿದ್ದು, ಈಗ ವಿಚಾರಣೆ ಮತ್ತೂಂದು ದಿಕ್ಕಿನತ್ತ ಹೊರಳುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್