ನಿರ್ಮಾತೃ ಪತ್ತೆ ಕಷ್ಟ
Team Udayavani, Aug 30, 2019, 5:36 AM IST
ನವದೆಹಲಿ: ಅಯೋಧ್ಯೆಯಲ್ಲಿ ರಾಮಜನ್ಮಸ್ಥಳದಲ್ಲಿ ಬಾಬರ್ನ ಆಸ್ಥೆಯ ಮೇರೆಗೆ ಮಸೀದಿ ನಿರ್ಮಾಣವಾಯಿತೇ ಇಲ್ಲವೇ ಎಂಬುದು 500 ವರ್ಷಗಳಾದ ನಂತರ ಈಗ ಅದನ್ನು ಪರೀಕ್ಷಿಸಿ ಸತ್ಯಾಂಶ ಕಂಡುಹಿಡಿಯುವುದು ಕಷ್ಟದ ಕೆಲಸ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ರಾಮಜನ್ಮಭೂಮಿ ವಿಚಾರಣೆಯ 15ನೇ ದಿನವಾದ ಗುರುವಾರ, ತನ್ನ ವಕೀಲರ ಮೂಲಕ ವಾದ ಮಂಡಿಸಿರುವ ‘ಅಖೀಲ ಭಾರತೀಯ ಶ್ರೀರಾಮ ಜನ್ಮಭೂಮಿ ಪುನರುದ್ಧಾರ ಸಮಿತಿ’, ರಾಮನ ಜನ್ಮಸ್ಥಳದಲ್ಲಿ ಬಾಬರನು ಮಸೀದಿ ಕಟ್ಟಿದ್ದನೇ ಇಲ್ಲವೇ ಎಂಬುದನ್ನು ಪರೀಕ್ಷಿಸಲು ಈ ಹಿಂದೆ ಇದೇ ಪ್ರಕರಣದ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಹಾಗಾಗಿ, ಸುಪ್ರೀಂ ಕೋರ್ಟ್ ಈ ಕುರಿತಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಆದರೆ, 500 ವರ್ಷಗಳ ನಂತರ ಮಸೀದಿ ಯಾರು ಕಟ್ಟಿದರು ಎಂಬುದನ್ನು ಪತ್ತೆ ಮಾಡುವುದು ಕಷ್ಟದ ಕೆಲಸ ಎಂದು ಹೇಳಿತು. ಪ್ರಕರಣದಲ್ಲಿ ಸಹ ಕಕ್ಷಿದಾರರಾಗಿರುವ ಮುಸ್ಲಿಂ ಸಂಘಟನೆ ಯೊಂದು, ರಾಮಜನ್ಮಸ್ಥಳದಲ್ಲಿದ್ದ ಮಸೀದಿಯನ್ನು ಬಾಬರ್ ಕಟ್ಟಿರಲಿಲ್ಲ. ಹಾಗಾಗಿ, ಆತನಿಗೆ ಆ ಸ್ಥಳದ ಮೇಲೆ ಯಾವ ಹಕ್ಕೂ ಇರಲಿಲ್ಲ ಎಂದಿದ್ದು, ಈಗ ವಿಚಾರಣೆ ಮತ್ತೂಂದು ದಿಕ್ಕಿನತ್ತ ಹೊರಳುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್