ನಮ್ಮದು ಸೈದ್ಧಾಂತಿಕ ಜಯ: ಮೋದಿ
Team Udayavani, Mar 7, 2018, 12:15 PM IST
ಹೊಸದಿಲ್ಲಿ: “ತ್ರಿಪುರದಲ್ಲಿ ಎಡಪಕ್ಷದ ಆಡಳಿತವನ್ನು ಕೊನೆಗಾಣಿಸಿರುವ ಬಿಜೆಪಿ ಯದ್ದು ಸೈದ್ಧಾಂತಿಕ ಜಯ. ದೇಶಾದ್ಯಂತ ಗೆಲುವಿನ ಓಟವನ್ನು ಮುಂದುವರಿಸಬೇಕೆಂದರೆ ಪಕ್ಷ ಇನ್ನಷ್ಟು ಪರಿಶ್ರಮಪಡಬೇಕಿದೆ,’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಿಲ್ಲಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಈಶಾನ್ಯದ ಮೂರು ರಾಜ್ಯಗಳಲ್ಲಿ ಪಕ್ಷದ ಸಾಧನೆಯ ಕುರಿತು ಪ್ರಸ್ತಾಪಿಸಿ ಈ ಮಾತುಗಳನ್ನು ಆಡಿದ್ದಾರೆ. ಸಭೆಗೆ ಪ್ರಧಾನಿ ಮೋದಿ ಆಗಮಿಸುತ್ತಲೇ ಬಿಜೆಪಿ ನಾಯಕರು,”ಜೀತ್ ಹಮಾರೀ ಜಾರೀ ಹೈ,ಅಬ್ ಕರ್ನಾಟಕ್ ಕಿ ಬಾರಿ ಹೈ’ (ನಮ್ಮ ಗೆಲುವು ಮುಂದುವರಿದಿದೆ. ಈಗ ಕರ್ನಾಟಕದ ಸರದಿ) ಎಂದು ಘೋಷಣೆ ಕೂಗುತ್ತಾ ಸ್ವಾಗತಿಸಿದರು. ನಂತರ ಮಾತನಾಡಿದ ಪ್ರಧಾನಿ, ತ್ರಿಪುರವು 25 ವರ್ಷಗಳಿಂದಲೂ ಮಾರ್ಕ್ಸ್ವಾದದ ಕೋಟೆಯಾಗಿತ್ತು. ಈಗ ನಾವು ಸೈದ್ಧಾಂತಿಕ ಗೆಲುವು ಸಾಧಿಸಿದ್ದೇವೆ. ಹಿಂಸೆ, ದ್ವೇಷ ತುಂಬಿದ ಎಡಪಕ್ಷಗಳನ್ನು ಜನ ತಿರಸ್ಕರಿಸಿದ್ದಾರೆ. ನಮಗೆ ಎಲ್ಲ ರಾಜ್ಯಗಳೂ ಸಮಾನ. ಅವುಗಳ ಅಭಿವೃದ್ಧಿಗೆ ದುಡಿಯುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ