ಐಟಿ ರಿಟರ್ನ್ಸ್ ಗಡುವು ವಿಸ್ತರಣೆ
Team Udayavani, May 2, 2021, 6:00 AM IST
ಹೊಸದಿಲ್ಲಿ: ಆದಾಯ ತೆರಿಗೆ ಪಾವತಿದಾರರಿಗೆ ಹಲವು ವಿಭಾಗಗಳಲ್ಲಿ ಗಡುವನ್ನು ವಿಸ್ತರಿಸಲಾಗಿದೆ. ಪ್ರಸ್ತುತ ಕೊರೊನಾ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಇರುವುದರಿಂದ ಗಡುವನ್ನು ವಿಸ್ತರಿಸಬೇಕೆಂದು ದೇಶಾದ್ಯಂತ ಮನವಿಗಳು ಬಂದಿದ್ದವು. ಇದನ್ನು ಸಚಿವಾಲಯ ಪುರಸ್ಕರಿಸಿದೆ.
ಈ ವರ್ಷ ಎ. 1ಕ್ಕೆ ಸಲ್ಲಿಸಬೇಕಾಗಿದ್ದ ಆದಾಯ ತೆರಿಗೆ ರಿಟರ್ನ್ಸ್ ಗಡುವನ್ನು ಮೇ 31ರ ವರೆಗೆ ವಿಸ್ತರಿಸಿದೆ. ಹಾಗೆಯೇ 2020-21ರ ವಿತ್ತೀಯ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ವಿಳಂಬಿತ ಸಲ್ಲಿಕೆಗೆ ಅಂತಿಮ ಗಡುವು ಮಾ. 31 ಆಗಿತ್ತು. ಅದನ್ನು ಪರಿಷ್ಕರಿಸಿ ಮೇ 31ರ ವರೆಗೆ ವಿಸ್ತರಿಸಲಾಗಿದೆ. ತೆರಿಗೆ ಕಡಿತಗೊಂಡ ಮಾಹಿತಿಯಿರುವ ಚಲನ್ಗಳನ್ನು ಎ. 30ರೊಳಗೆ ಸಲ್ಲಿಸಲು ಈ ಹಿಂದೆ ತಿಳಿಸಲಾಗಿತ್ತು. ಅದಕ್ಕೂ ಮೇ 31ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಆದಾಯ ತೆರಿಗೆ ಆಯುಕ್ತರಿಗೆ ಮನವಿ ಸಲ್ಲಿಸಲು, ವಿವಾದ ಇತ್ಯರ್ಥಕ್ಕೆ ಆಕ್ಷೇಪಣೆ ಸಲ್ಲಿಸುವುದಕ್ಕೂ ಮೇ 31ರ ವರೆಗೆ ಅವಕಾಶವಿದೆ.
1.41 ಲಕ್ಷ ಕೋ.ರೂ. ಜಿಎಸ್ಟಿ ಸಂಗ್ರಹ
ಎಪ್ರಿಲ್ನಲ್ಲಿ ದಾಖಲೆಯ 1.41 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದೆ. ಮಾರ್ಚ್ಗೆ ಹೋಲಿಸಿದರೆ, ಇದು ಶೇ. 14 ಹೆಚ್ಚು. ಎಪ್ರಿಲ್ನಲ್ಲಿ ಸ್ಥಳೀಯ ವಹಿವಾಟು ಮೂಲಕವೇ ಹೆಚ್ಚು ತೆರಿಗೆ ಹರಿದು ಬಂದಿದೆ. ಇದು ಕೂಡ ಕಳೆದ ತಿಂಗಳಿಗೆ ಹೋಲಿಸಿದರೆ ಶೇ. 21ರಷ್ಟು ಹೆಚ್ಚು ಎಂದು ಕೇಂದ್ರ ಸರಕಾರ ತಿಳಿಸಿದೆ. ಕಳೆದ ಏಳು ತಿಂಗಳುಗಳಿಂದ ಪ್ರತೀ ತಿಂಗಳು 1 ಲಕ್ಷ ಕೋಟಿ ರೂ.ಗಿಂತಲೂ ಹೆಚ್ಚು ಜಿಎಸ್ಟಿ ಸಂಗ್ರಹವಾಗುತ್ತಿದೆ. ಈ ಮೂಲಕ ದೇಶದ ಆರ್ಥಿಕತೆ ಹಳಿಗೆ ಬರುತ್ತಿರುವುದು ನಿಚ್ಚಳವಾಗಿದೆ ಎಂದು ವಿತ್ತ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ