ಚಂದ್ರಬಾಬು ನಾಯ್ಡು ಬಂಟ,TDP ಎಂಪಿ ರಮೇಶ್ ನಿವಾಸಗಳ ಮೇಲೆ IT ದಾಳಿ
Team Udayavani, Oct 12, 2018, 11:45 AM IST
ಹೈದರಾಬಾದ್ : ತೆಲುಗು ದೇಶ ಪಕ್ಷದ ಸಂಸದ ಸಿ ಎಂ ರಮೇಶ್ ಅವರ ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿನ ನಿವಾಸಗಳ ಮೇಲೆ ಇಂದು ಶುಕ್ರವಾರ ಆದಾಯ ತೆರಿಗೆ ಇಲಾಖಾಧಿಕಾರಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಹೈದರಾಬಾದ್ ಮತ್ತು ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಪೋಟ್ಲದುರ್ತಿ ಯಲ್ಲಿನ ಸಂಸದ ರಮೇಶ್ ಅವರ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ಏಕ ಕಾಲಕ್ಕೆ ದಾಳಿ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಇದೇ ರೀತಿ ಐಟಿ ಅಧಿಕಾರಿಗಳು ರಮಲೇಶ್ ಅವರ ರಿತ್ವಿಕ್ ಪ್ರೋಜೆಕ್ಟ್ ಕಂಪೆನಿಯ ಕಾರ್ಯಾಲಯದ ಮೇಲೂ ದಾಳಿ ನಡೆಸಿದರು.
ಇಂದು ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಐಟಿ ದಾಳಿ ಈಗಲೂ ಮುಂದುವರಿದಿದೆ; ಸುಮಾರು 30 ಐಟಿ ಅಧಿಕಾರಿಗಳು ಈ ದಾಳಿಗಳಲ್ಲಿ ಭಾಗಿಯಾಗಿದ್ದಾರೆ.
ರಾಜ್ಯಸಭೆಯ ತೆಲುಗು ದೇಶಂ ಸದಸ್ಯರಾಗಿರುವ ರಮೇಶ್ ಅವರು ಈ ಐಟಿ ದಾಳಿ ವೇಳೆ ದಿಲ್ಲಿಯಲ್ಲಿ ಇದ್ದಾರೆ.
ಕಡಪ ಜಿಲ್ಲೆಯಲ್ಲಿನ ರಮೇಶ್ ಅವರ ನಿವಾಸದ ಮೇಲೆ ದಾಳಿ ನಡೆಸುವ ಮುನ್ನ ಐಟಿ ಅಧಿಕಾರಿಗಳು ಅಲ್ಲಿದ್ದ ರಮೇಶ್ ಅವರ ಸಹೋದರ ಸಿ ಎಂ ಸುರೇಶ್ ಅವರನ್ನು ಹೊರಗೆ ಹೋಗುವಂತೆ ಸೂಚಿಸಿದರು. ಬಳಿಕವೇ ಅವರು ಶೋಧ ಕಾರ್ಯಾಚರಣೆ ಕೈಗೊಂಡರು.
ರಮೇಶ್ ಅವರು ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರ ಬಂಟನಾಗಿದ್ದಾರೆ. ಈ ಐಟಿ ದಾಳಿಗಳು ರಾಜಕೀಯ ಪ್ರೇರಿತವಾಗಿವೆ ಎಂದವರು ಟೀಕಿಸಿದ್ದಾರೆ. ಈ ದಾಳಿಗಳ ಹೊರತಾಗಿಯೂ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ತಮ್ಮ ಹೋರಾಟವನ್ನು ತಾನು ಮುಂದುವರಿಸುವುದಾಗಿಯೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…