Heavy Rain ಇಂದಿನಿಂದ ಐದು ದಿನ ಮತ್ತೆ ಮಳೆಯ ಆರ್ಭಟ

ಹಿಮಾಚಲ, ಉತ್ತರಾಖಂಡದಲ್ಲಿ ಅಪಾಯದ ಎಚ್ಚರಿಕೆ ; ತಗ್ಗಿದ ಪ್ರವಾಹ

Team Udayavani, Jul 17, 2023, 7:00 AM IST

ಇಂದಿನಿಂದ ಐದು ದಿನ ಮತ್ತೆ ಮಳೆಯ ಆರ್ಭಟ

ಹೊಸದಿಲ್ಲಿ: ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇತ್ತೀಚೆಗೆ ಭಾರೀ ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿಗೆ ಕಾರಣವಾಗಿದ್ದ ವರುಣ, ಸೋಮವಾರದಿಂದ ಮತ್ತೆ ಅಬ್ಬರಿಸಲಿದ್ದಾನೆ. ಸೋಮವಾರದಿಂದ ಈ ಎರಡೂ ರಾಜ್ಯಗಳಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಜು.17ರಿಂದ ದೇಶದ ಪಶ್ಚಿಮ ಕರಾವಳಿಯಲ್ಲಿ ಭಾರೀ ಮಳೆಯಾದರೆ, ಈಶಾನ್ಯ ಭಾರತದಲ್ಲಿ ವರುಣನಬ್ಬರ ಕಡಿಮೆಯಾಗಲಿದೆ ಎಂದೂ ಇಲಾಖೆ ತಿಳಿಸಿದೆ. ಇದೇ ವೇಳೆ, ದಿಲ್ಲಿಯಲ್ಲಿ ಯಮುನಾ ನದಿಯ ಪ್ರವಾಹ ರವಿವಾರ ಬೆಳಗ್ಗೆ ಸ್ವಲ್ಪಮಟ್ಟಿಗೆ ಇಳಿಮುಖವಾಗಿದೆ. ಆದರೆ ಸಂಜೆ ಅನಂತರ ರಾಷ್ಟ್ರ ರಾಜಧಾನಿಯಲ್ಲಿ ಮಳೆಯಾಗಿರುವ ಕಾರಣ, ಸದ್ಯ ಕ್ಕಂತೂ ನಿರಾಳ ಎನ್ನುವಂಥ ಸ್ಥಿತಿ ಬಂದಿಲ್ಲ.

ಹಿಮಾಚಲ ಪ್ರದೇಶದಲ್ಲಿ ಮುಂದಿನ 5 ದಿನಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಉತ್ತರಾಖಂಡ ಮತ್ತು ಪೂರ್ವ ಉತ್ತರ ಪ್ರದೇಶಗಳಲ್ಲಿ ಮೂರು ದಿನಗಳ ಕಾಲ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಝಾರ್ಖಂಡ್‌, ಒಡಿಶಾದಲ್ಲಿ ಸೋಮವಾರ ಧಾರಾಕಾರ ಮಳೆಯಾಗಲಿದೆ. ಮಧ್ಯ ಪ್ರದೇಶ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಛತ್ತೀಸ್‌ಗಢದಲ್ಲೂ ಮಳೆಯಬ್ಬರ ಮುಂದು ವರಿಯಲಿದೆ ಎಂದು ತಿಳಿಸಿದೆ. ಒಟ್ಟಾರೆ 7 ರಾಜ್ಯಗಳಿಗೆ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ.

ಇಬ್ಬರು ನಾಪತ್ತೆ: ದಿಲ್ಲಿಯಲ್ಲಿ ಯಮುನಾ ನದಿ ಪ್ರವಾಹ ಸ್ವಲ್ಪಮಟ್ಟಿಗೆ ತಗ್ಗಿದ್ದು, ತೀರ ಪ್ರದೇಶದ ಜನರು ಶಿಬಿರಗಳಿಂದ ತಮ್ಮ ತಮ್ಮ ಮನೆಗಳಿಗೆ ವಾಪ ಸಾಗುತ್ತಿದ್ದಾರೆ. ಇದೇ ವೇಳೆ, ರವಿವಾರ ಗ್ರೇಟರ್‌ ನೋಯ್ಡಾದಲ್ಲಿ ಸ್ನಾನಕ್ಕೆಂದು ನದಿಗಿಳಿದಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ. ಈ ನಡುವೆ, ಪ್ರವಾಹದಿಂದಾಗಿ ಆಧಾರ್‌ ಸೇರಿದಂತೆ ಪ್ರಮುಖ ದಾಖಲೆಗಳನ್ನು ಕಳೆದುಕೊಂಡವರಿಗೆ, ಅವುಗಳನ್ನು ಮರಳಿ ಕೊಡಿಸಲು ವಿಶೇಷ ಕ್ಯಾಂಪ್‌ ರೂಪಿಸುವು ದಾಗಿ ದಿಲ್ಲಿ ಸಿಎಂ ಕೇಜ್ರಿವಾಲ್‌ ಘೋಷಿಸಿದ್ದಾರೆ.

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಸುರಿದ ಮಳೆಯಿಂದಾಗಿ ಹಲವಾರು ಗ್ರಾಮಗಳು ಜಲಾವೃತಗೊಂಡಿವೆ.

ದ.ಕೊರಿಯಾದಲ್ಲಿ ಪ್ರವಾಹ: ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆಯಿಂದಾಗಿ ದಿಢೀರ್‌ ಪ್ರವಾಹ ಉಂಟಾ ಗಿದೆ. ಸುರಂಗವೊಂದರಲ್ಲಿ ನೀರು ತುಂಬಿಕೊಂಡು 15 ವಾಹನಗಳು ಸಿಲುಕಿದ್ದು, ಒಳಗಿದ್ದ 9 ಮಂದಿಯ ಮೃತದೇಹಗಳನ್ನು ರವಿವಾರ ಹೊರತೆಗೆ¿ ು ಲಾಗಿದೆ. ಇನ್ನೂ ಹಲವರು ಸುರಂಗದಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜು.9ರಿಂದ ಈವರೆಗೆ ಮಳೆ, ಪ್ರವಾಹಕ್ಕೆ 37 ಮಂದಿ ಬಲಿಯಾಗಿದ್ದಾರೆ. ಸಾವಿರಾರು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

ಕುಸಿಯುವ ಭೀತಿಯಲ್ಲಿ ಗಡಿ ಸೇತುವೆ
ಉತ್ತರಾಖಂಡದ ಚಮೋಲಿಯಲ್ಲಿ ಭಾರತ-ಚೀನ ಗಡಿ ಪ್ರದೇಶದಲ್ಲಿರುವ ಸೇತುವೆಯೊಂದು ಅಪಾಯದಂಚಿನಲ್ಲಿದೆ. ಭಾರೀ ಮಳೆಯಿಂದಾಗಿ ನದಿ ಉಕ್ಕಿ ಹರಿಯುತ್ತಿರುವ ಕಾರಣ, ಜೋಶಿಮಠ ಸೇರಿದಂತೆ ಹಲವು ಗ್ರಾಮಗಳನ್ನು ಸಂಪರ್ಕಿಸುವ ಸೇತುವೆಯು ಜು.10ರಂದು ಭಾಗಶಃ ಕೊಚ್ಚಿ ಹೋಗಿತ್ತು. ಆದರೆ ಗಡಿ ರಸ್ತೆ ಸಂಸ್ಥೆ (ಬಿಆರ್‌ಒ)ಯ ಯೋಧರು ಹ್ಯೂಮ್‌ ಪೈಪ್‌ಗ್ಳನ್ನು ಅಳವಡಿಸಿ ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದರು. ಆದರೆ ನೀರಿನ ಹರಿವು ಹೆಚ್ಚಿರುವ ಕಾರಣ ಹಾಗೂ ಮಳೆ ಮತ್ತಷ್ಟು ತೀವ್ರಗೊಳ್ಳುವ ಸಂಭವವಿದ್ದು ಸೇತುವೆ ಅಪಾಯದಲ್ಲಿದೆ ಎಂದು ಬಿಆರ್‌ಒ ತಿಳಿಸಿದೆ.

ರಾಜಸ್ಥಾನದಲ್ಲಿ ಅಸಾಮಾನ್ಯ ಮಳೆ
ರಾಜಸ್ಥಾನದ 33 ಜಿಲ್ಲೆಗಳ ಪೈಕಿ 15ರಲ್ಲಿ ಈ ಬಾರಿ ಅಸಾಮಾನ್ಯ ಮಳೆಯಾಗಿದ್ದು, ಜು.15ರವರೆಗೆ ವಾಡಿಕೆಗಿಂತ ಶೇ.80.9ರಷ್ಟು ಹೆಚ್ಚು ಮಳೆ ಸುರಿದಿದೆ. ವಾಡಿಕೆಯಂತೆ ಈ ಅವಧಿಯಲ್ಲಿ 146.39 ಮಿ.ಮೀ. ಮಳೆಯಾಗುತ್ತದೆ. ಆದರೆ ಈ ಬಾರಿ 264.75 ಮಿ.ಮೀ. ಮಳೆಯಾಗಿದೆ. ಅಲ್ಲದೇ ರಾಜಸ್ಥಾನದ ಒಂದೇ ಒಂದು ಜಿಲ್ಲೆಯಲ್ಲೂ ಮಳೆ ಕೊರತೆ ಕಂಡುಬಂದಿಲ್ಲ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.