ಹಿಮಾಲಯ ಶ್ರೇಣಿಯಲ್ಲಿ ಯೋಧರಿಂದ ಯೋಗ
Team Udayavani, Jun 21, 2022, 12:18 PM IST
ಹೊಸದಿಲ್ಲಿ: ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ಉತ್ತರದ ಲಡಾಖ್ ನಿಂದ ಸಿಕ್ಕಿಂವರೆಗೆ ಇರುವ ಹಿಮಾಲಯ ಪರ್ವತದಲ್ಲಿ ಯೋಗಾಭ್ಯಾಸ ಮಾಡಿದರು.
ಈ ಕುರಿತು ಕೂ ಮಾಡಿರುವ ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಯೋಗವೇ ರಕ್ಷಾಕವಚ! ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ನ ಈ ಹಿಮವೀರರಿಗೆ ಲಡಾಖ್ ನಲ್ಲಿನ ಹವಾಮಾನವು ಪ್ರತಿಬಂಧಕವಾಗಿಲ್ಲ ಏಕೆಂದರೆ ಅವರು ಅಂತಾರಾಷ್ಟ್ರೀಯ ಯೋಗ ದಿನವನ್ನು ಹೆಮ್ಮೆಯಿಂದ ಆಚರಿಸುತ್ತಿದ್ದಾರೆ’ ಎಂದು ಬರೆದು ಕೊಂಡಿದ್ದಾರೆ.
ಇದನ್ನೂಓದಿ:ಮೈಸೂರು: ಆಯುಷ್ ಪ್ರದರ್ಶನ ಮಳಿಗೆ ಉದ್ಘಾಟಿಸಿದ ಪ್ರಧಾನಿ ಮೋದಿ
ಐಟಿಬಿಪಿ ಯೋಧರು ಹಲವಾರು ವರ್ಷಗಳಿಂದ ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ ಭಾರತ-ಚೀನಾ ಗಡಿಗಳ ವಿವಿಧ ಎತ್ತರದ ಹಿಮಾಲಯ ಶ್ರೇಣಿಗಳಲ್ಲಿ ಯೋಗವನ್ನು ಪ್ರಚಾರ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಬಾರಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು ಅಂತಾರಾಷ್ಟ್ರೀಯ ಯೋಗ ದಿನದಂದು ಹಾಡನ್ನು ಅರ್ಪಿಸಿದ್ದಾರೆ. ಜೊತೆಗೆ ಐಟಿಬಿಪಿ ಯೋಧರು ಲಡಾಖ್ ನಲ್ಲಿ 17,000 ಅಡಿ ಎತ್ತರದಲ್ಲಿ ಯೋಗವನ್ನು ಪ್ರದರ್ಶಿಸಿದ್ದಾರೆ.
ಪ್ರಪಂಚದಾದ್ಯಂತ 2022ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸುಮಾರು 25 ಕೋಟಿ ಜನರು ಭಾಗವಹಿಸಿದ್ದಾರೆ ಎಂದು ಆಯುಷ್ ಸಚಿವಾಲಯ ತಿಳಿಸಿದೆ. ಅಷ್ಟೇ ಅಲ್ಲದೇ ಹರಿದ್ವಾರದ ಪತಂಜಲಿ ಯೋಗಪೀಠದಲ್ಲಿ ಯೋಗ ಗುರು ರಾಮದೇವ್ ಯೋಗ ಪ್ರದರ್ಶನ ನೀಡಿದ್ದರು. ಅನೇಕ ಮಕ್ಕಳು ಮತ್ತು ಇತರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ