ಐಟಿಸಿ ಮುಖ್ಯಸ್ಥ ದೇವೇಶ್ವರ್ ನಿಧನ
Team Udayavani, May 12, 2019, 6:00 AM IST
ಹೊಸದಿಲ್ಲಿ: ಭಾರತದ ಹೆಸರಾಂತ ಕಂಪನಿ ಐಟಿಸಿಯ ಮುಖ್ಯಸ್ಥ ವೈ.ಸಿ. ದೇವೇಶ್ವರ್ (72) ಶನಿವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೇವಲ ಸಿಗರೇಟ್ ತಯಾರಿಕಾ ಕಂಪನಿಯಾಗಿದ್ದ ಐಟಿಸಿಯನ್ನು, ವಿವಿಧ ಕ್ಷೇತ್ರಗಳಿಗೆ ಕಾಲಿಡುವಂತೆ ಮಾಡಿ, ಹಲವಾರು ಜನಪ್ರಿಯ ಉತ್ಪಾದನೆಗಳನ್ನು ಕೈಗೊಳ್ಳುವ ಮೂಲಕ ಆ ಕಂಪನಿಯನ್ನು ಉತ್ತುಂಗಕ್ಕೇರಿಸಿದ ಹೆಗ್ಗಳಿಕೆ ಇವರದ್ದು. 1968ರಲ್ಲಿ ಐಟಿಸಿ ಸಂಸ್ಥೆಗೆ (ಇಂಡಿಯನ್ ಟೊಬ್ಯಾಕೋ ಕಂಪನಿ) ಉದ್ಯೋಗಿಯಾಗಿ ಸೇರಿದ್ದ ದೇವೇಶ್ವರ್, 1984ರ ಏ. 11ರಂದು ಕಂಪನಿಯ ನಿರ್ದೇಶಕರಾಗಿ ನೇಮಕಗೊಂಡಿದ್ದರು. 1996ರ ಜ.1ರಂದು ಸಂಸ್ಥೆಯ ಮುಖ್ಯಸ್ಥರಾಗಿ ನೇಮಕಗೊಂಡರು. 90ರ ದಶಕದ ಮಧ್ಯಭಾಗದಲ್ಲಿ ಕಂಪ ನಿಯ ಆದಾಯ 5,200 ಕೋಟಿ ರೂ.ಗಳಿಗಿಂತಲೂ ಕಡಿಮೆ ಇತ್ತು. ಲಾಭ 452 ಕೋಟಿ ರೂ.ಗಳಷ್ಟಿತ್ತು. 2017-18ರಲ್ಲಿ ಈ ಕಂಪನಿಯ ಆದಾಯ 44, 329.77 ಕೋಟಿ ರೂ.ಗಳಷ್ಟಾಗಿತ್ತಲ್ಲದೆ, ನಿವ್ವಳ ಲಾಭ 11,223.25 ಕೋಟಿ ರೂ.ಗೇರಿತ್ತು. ಆ ಮಟ್ಟಕ್ಕೆ ಕಂಪನಿಯನ್ನು ಬೆಳೆಸಿದ ಹೆಗ್ಗಳಿಕೆ ಅವರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ