ಸೂಕ್ಷ್ಮ ವಿಚಾರ ಪಾಕ್ ಉಗ್ರರೊಂದಿಗೆ ಹಂಚಿಕೊಂಡ ಮೌಲ್ವಿಯ ಬಂಧನ
Team Udayavani, Sep 3, 2022, 6:16 PM IST
ಶ್ರೀನಗರ: ಪಾಕಿಸ್ತಾನ ಮೂಲದ ಭಯೋತ್ಪಾದಕರಿಗೆ ಭದ್ರತಾ ವಿಚಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಮದ್ರಸಾ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಮೌಲ್ವಿಯಾಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಖಾರಿ ಅಬ್ದುಲ್ ವಾಹಿದ್ (25) ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಮತ್ತು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಡೂಲ್ ಪ್ರದೇಶದವನಾದ ವಾಹಿದ್ ಪತ್ನಿ ಮತ್ತು ಏಳು ತಿಂಗಳ ಮಗುವಿನೊಂದಿಗೆ ದಾದ್ಪೇತ್ ಗ್ರಾಮದ ಮದರಸಾದಲ್ಲಿ ನೆಲೆಸಿದ್ದ, ಆತನ ಬಂಧನವನ್ನು “ಪ್ರಮುಖ ಪ್ರಗತಿ” ಎಂದು ಕರೆದ ಅಧಿಕಾರಿಗಳು, ಆರಂಭದಲ್ಲಿ ಮಿಲಿಟರಿ ಗುಪ್ತಚರರು ಗಡಿಯಾದ್ಯಂತ ಮಾಹಿತಿಯನ್ನು ರವಾನಿಸುವ ಶಂಕಿತನ ಉಪಸ್ಥಿತಿಯ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದರು ಎಂದು ಹೇಳಿದ್ದಾರೆ.
ಆರೋಪಿಗಳನ್ನು ಗುರುತಿಸಲು ಮತ್ತು ಬಂಧಿಸಲು ಒಟ್ಟಾಗಿ ಕೆಲಸ ಮಾಡಿದ ವಿವಿಧ ಭದ್ರತಾ ಏಜೆನ್ಸಿಗಳ ಕೈಗೆ ವಾಹಿದ್ ಸಿಕ್ಕಿಬಿದ್ದಿದ್ದು, ಕಳೆದ ವಾರ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಪೊಲೀಸರು, ಮಿಲಿಟರಿ ಗುಪ್ತಚರ ಮತ್ತು ರಾಜ್ಯ ತನಿಖಾ ಸಂಸ್ಥೆ (ಎಸ್ಐಎ) ಜಂಟಿಯಾಗಿ ವಿಚಾರಣೆ ನಡೆಸಿದಾಗ, ವಾಹಿದ್ ಡಿಸೆಂಬರ್ 2020 ರಿಂದ ಭಯೋತ್ಪಾದಕ ಗುಂಪು ಕಾಶ್ಮೀರ ಜನಬಾಜ್ ಫೋರ್ಸ್ (ಕೆಜೆಎಫ್) ಗಾಗಿ ಕೆಲಸ ಮಾಡುತ್ತಿದ್ದೇನೆ ಮತ್ತು ಭದ್ರತಾ ವಿಚಾರಗಳ ವಿಡಿಯೋಗಳು ಮತ್ತು ಫೋಟೋಗಳನ್ನು ರವಾನಿಸುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್