ವಿಶೇಷ ಸ್ಥಾನಮಾನಕ್ಕೆ ಜಗನ್ ಬೇಡಿಕೆ
Team Udayavani, May 27, 2019, 6:13 AM IST
ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಇದೇ 30ರಂದು ಪ್ರಮಾಣ ಸ್ವೀಕರಿಸಲಿರುವ ವೈಎಸ್ಸಾರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ಮೋಹನ್ ರೆಡ್ಡಿ ರವಿವಾರ ಹೊಸದಿಲ್ಲಿಗೆ ತೆರಳಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಆಂಧ್ರಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆಯನ್ನೂ ಅವರು ಮೋದಿ ಮುಂದಿಟ್ಟಿದ್ದಾರೆ. ಲೋಕಕಲ್ಯಾಣ ಮಾರ್ಗದಲ್ಲಿರುವ ಮೋದಿ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಜಗನ್, “ಆರ್ಥಿಕ ಸಂಕಷ್ಟದಲ್ಲಿರುವ ನಮ್ಮ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎನ್ನುವುದು ನಮ್ಮ ಕೋರಿಕೆ. ನಾನೀಗ ಮೋದಿ ಅವರಿಕೆ ಕೋರಿಕೆಯಷ್ಟೇ ಸಲ್ಲಿಸಬಲ್ಲೆ. ಆದೇಶ ನೀಡಲು ಸಾಧ್ಯವಿಲ್ಲ. ಇಂದು ನಮಗೆ ವಿಶೇಷ ಸ್ಥಾನಮಾನ ಸಿಗದೇ ಇರಬಹುದು. ಆದರೆ, ನಾನು ಮೋದಿಯವರಿಗೆ ಮತ್ತೆ ಮತ್ತೆ ಇದನ್ನು ನೆನಪಿಸುತ್ತಿರುತ್ತೇನೆ. ಒಂದು ದಿನ ಬದಲಾವಣೆ ಕಾಣಬಹುದು’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…