ಆಂಧ್ರ ಪ್ರದೇಶದಲ್ಲಿ ಝಗಮಗಿಸಿದ ಜಗನ್‌


Team Udayavani, May 24, 2019, 2:16 PM IST

andra

25 ಸಂಸತ್‌ ಬಲದ ಆಂಧ್ರಪ್ರದೇಶದಲ್ಲಿ ಜಗನ್‌ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಪಾರ್ಟಿ ಕ್ಲೀನ್‌ ಸ್ವೀಪ್‌ ಮಾಡಿದೆ. ಈ ಮೂಲಕ ಲೋಕಸಭೆ ಯಲ್ಲಿ ಮೂರನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಎನ್‌ಡಿಎಗೆ ಸೆಡ್ಡು ಹೊಡೆದು ಪ್ರಾದೇಶಿಕ ಪಕ್ಷಗಳನ್ನು ಒಂದುಗೂಡಿಸಿ ಕೇಂದ್ರದಲ್ಲಿ ಅಧಿಕಾರ ನಡೆಸಲು ತಂತ್ರಗಾರಿಕೆ ನಡೆಸುತ್ತಿದ್ದ ಟಿಡಿಪಿ ನೇತಾರ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಮ್ಮ ರಾಜ್ಯದಲ್ಲೇ ಸೊನ್ನೆ ಸುತ್ತಿದ್ದಾರೆ.

ತವರು ರಾಜ್ಯದಲ್ಲೇ ಖಾತೆ ತೆರೆಯುವಲ್ಲಿ ವಿಫ‌ಲರಾಗಿರುವ ನಾಯ್ಡುಗೆ ರಾಷ್ಟಮಟ್ಟದಲ್ಲಿ ಭಾರೀ ಮುಖಭಂಗವಾಗಿದೆ. ಜಗನ್‌ ವಿರುದ್ಧ ಸಂಪೂರ್ಣವಾಗಿ ಮಂಡಿಯೂರಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂದ್ದ ಟಿಡಿಪಿ ಯಶ ಕಂಡಿತ್ತು. ರಾಜ್ಯದಲ್ಲಿ ಅಧಿಕಾರ ಹಿಡಿಯುವುದರ ಜೊತೆಗೆ ಎನ್‌ಡಿಎಸ್‌ ಸರ್ಕಾರದಲ್ಲೂ ಸಚಿವ ಸ್ಥಾನಗಿಟ್ಟಿಸಿಕೊಂಡಿತ್ತು.

ಜೊತೆಗೆ ಖ್ಯಾತ ನಟ ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಾರ್ಟಿ ಕೂಡ ಹೀನಾಯ ಸೋಲನ್ನಪ್ಪಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಸಹ ಖಾತೆ ತೆರೆದಿಲ್ಲ. ಆಂಧ್ರ ವಿಭಜನೆ ನಂತರ ಮೊದಲ ಬಾರಿ ಅಧಿಕಾರಕ್ಕೇರಿದ್ದ ಚಂದ್ರಬಾಬು ನಾಯ್ಡು ಅವರ ವೈಫ‌ಲ್ಯಗಳು ಹಾಗೂ ಆಡಳಿತವಿರೋಧಿ ಅಲೆ ಯನ್ನು ಮುಂದಿಟ್ಟುಕೊಂಡು ಕಳೆದ ಎರಡೂ¾ರು ವರ್ಷ ಗಳಿಂದ ಸಂಘಟಿತ ಹೋರಾಟ ನಡೆಸಿದ್ದ ಜಗನ್‌, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ದಾಖಲಿಸಿದ್ದಾರೆ. ರಾಜ್ಯದಲ್ಲಿ 3,648 ಕಿ.ಮೀ. ಪಾದಯಾತ್ರೆ ನಡೆಸಿದ್ದ ಜಗನ್‌, ಪ್ರತಿ ಹಳ್ಳಿಗಳನ್ನೂ ಸುತ್ತಿ ಜನರಿಗೆ ಹತ್ತಿರವಾಗಿ, ಅನುಕಂಪದ ಲಾಭ ಪಡೆಯುವಲ್ಲಿ ಸಫ‌ಲರಾಗಿದ್ದಾರೆ. ಈ ಹಿಂದೆ ಅವರ ತಂದೆ ವೈ.ಎಸ್‌.ರಾಜಶೇಖರ ರೆಡ್ಡಿ ಕೂಡ ಬೃಹತ್‌ ಪಾದಯಾತ್ರೆ ನಡೆಸಿ ಕಾಂಗ್ರೆಸ್‌ ಅಧಿಕಾರಕ್ಕೆ ತರವಲ್ಲಿ ಯಶಸ್ವಿಯಾಗಿದ್ದರು.

ಗೆದ್ದ ಪ್ರಮುಖರು
ಬಾಲನ್‌ ಚಂದ್ರಶೇಖರ್‌,
(ವೈಎಸ್‌ಆರ್‌)- ವಿಜಯನಗರಂ
ಬಲ್ಲಿ ದುರ್ಗ ಪ್ರಸಾದ್‌ ರಾವ್‌
(ವೈಎಸ್‌ಆರ್‌)-ತಿರುಪತಿ
ಆಯುಷ್ಮಾನ್‌ ಡಾಕ್ಟರ್‌ ಸಂಜೀವ್‌ಕುಮಾರ್‌, (ವೈಎಸ್‌ಆರ್‌)- ಕರ್ನೂಲು

ಸೋತ ಪ್ರಮುಖರು
ಪುಸಪತಿ ಅಶೋಕ್‌ ಗಣಪತಿ ರಾಜು, (ಟಿಡಿಪಿ)-ವಿಜಯನಗರಂ
ಕಿಶೋರ್‌ ಚಂದ್ರ ಡಿಯೊ, (ಟಿಡಿಪಿ)-ಅರಕು
ಕೆಸಿನೇನಿ ಶ್ರೀನಿವಾಸ್‌, (ಟಿಡಿಪಿ)-ವಿಜಯವಾಡ
ಜನರು ನೀಡಿದ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ ಮತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಜಗನ್‌ರೆಡ್ಡಿಯವರಿಗೆ ಶುಭವಾಗಲಿ.
ಚಂದ್ರಬಾಬು ನಾಯ್ಡು, ಆಂಧ್ರ ಸಿಎಂ

ವೈಎಸ್‌ಆರ್‌ ಕಾಂಗ್ರೆಸ್‌ಗೆ ಮತ ನೀಡಿದ ಆಶೀರ್ವದಿಸಿದ್ದಕ್ಕೆ ಧನ್ಯವಾದ ಅರ್ಪಿಸು ತ್ತೇನೆ. ಈ ಫ‌ಲಿತಾಂಶ ವಿಶ್ವಾಸಾರ್ಹತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದಿದೆ. ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತೇನೆ.
ಜಗನ್‌ಮೋಹನ್‌ ರೆಡ್ಡಿ ,  ವೈಆರ್‌ಎಸ್‌ ಕಾಂಗ್ರೆಸ್‌ ನೇತಾರ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.