ಆಂಧ್ರದಲ್ಲಿ 30ರಿಂದ ಜಗನ್ ಆಡಳಿತ
Team Udayavani, May 26, 2019, 6:00 AM IST
ಆಂಧ್ರಪ್ರದೇಶ : ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ವೈಎಸ್ಸಾರ್ ಕಾಂಗ್ರೆಸ್ನ ಶಾಸಕಾಂಗ ಪಕ್ಷದ ನಾಯಕನಾಗಿ ವೈ.ಎಸ್.ಜಗನ್ಮೋಹನ್ ರೆಡ್ಡಿ ಅವರು ಆಯ್ಕೆಯಾಗಿದ್ದಾರೆ.
ಬಳಿಕ ರಾಜ್ಯಪಾಲ ಇ.ವಿ.ಎಲ್.ನರಸಿಂಹನ್ರನ್ನು ಭೇಟಿ ಯಾಗಿ ಸರಕಾರ ರಚನೆಗೆ ಹಕ್ಕು ಮಂಡಿಸಲಾಗಿದ್ದು, ಇದೇ 30ರಂದು ಜಗನ್ ವಿಜಯವಾಡದ ಇಂದಿರಾ ಗಾಂಧಿ ಮುನ್ಸಿಪಲ್ ಸ್ಟೇಡಿಯಂನಲ್ಲಿ ಮಧ್ಯಾಹ್ನ 12.23ಕ್ಕೆ ಆಂಧ್ರದ ನೂತನ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ. ನಿರ್ಗಮಿತ ಸಿಎಂ ಚಂದ್ರಬಾಬು ನಾಯ್ಡು ಅವರು ಮಾಡಿರುವ ತಪ್ಪು ಕೆಲಸಗಳಿಗಾಗಿ ದೇವರು ಅವರಿಗೆ ಸರಿಯಾದ ಶಿಕ್ಷೆಯನ್ನೇ ನೀಡಿದ್ದಾರೆ ಎಂದೂ ಜಗನ್ ಹೇಳಿದ್ದಾರೆ.
ಮೋದಿ ಸರಕಾರಕ್ಕೆ ಬಾಹ್ಯ ಬೆಂಬಲ?: ರವಿವಾರ ಹೊಸದಿಲ್ಲಿಗೆ ತೆರಳಲಿರುವ ಜಗನ್ ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತು ಕತೆ ನಡೆಸಲಿದ್ದಾರೆ. ಕೇಂದ್ರ ಸರಕಾರಕ್ಕೆ ಬಾಹ್ಯ ಬೆಂಬಲ ಘೋಷಿಸುವ ಕುರಿತು ಈ ವೇಳೆ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ