5 ಡಿಸಿಎಂಗಳು ಸೇರಿ 25 ಸಚಿವರು ಜಗನ್ ಸಂಪುಟಕ್ಕೆ ಸೇರ್ಪಡೆ
6 ಮಂದಿ ತಂದೆಯ ಒಡನಾಡಿಗಳನ್ನು ಸಂಪುಟಕ್ಕೆ ಸೇರಿಸಿಕೊಂಡ ಯುವ ಸಿಎಂ
Team Udayavani, Jun 8, 2019, 4:02 PM IST
ಅಮರಾವತಿ : ಆಂಧ್ರ ಪ್ರದೇಶದ ವೈಎಸ್ಆರ್ ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ಶನಿವಾರ ನಡೆದಿದ್ದು, ಐವರು ಉಪಮುಖ್ಯಮಂತ್ರಿಗಳು ಸೇರಿ 25 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
25 ಮಂದಿ ವೈಎಸ್ಆರ್ ಕಾಂಗ್ರೆಸ್ ನಾಯಕರಿಗೆ ರಾಜ್ಯಪಾಲ ಈಎಸ್ಎಲ್ ನರಸಿಂಹನ್ ಅವರು ಪ್ರಮಾಣ ವಚನ ಬೋಧಿಸಿದರು.
11.49 ಕ್ಕೆ ಕಾರ್ಯಕ್ರಮ ಆರಂಭವಾಗಿತ್ತು. ಇದೇ ಸಮಯಕ್ಕೆ ಕಾರ್ಯಕ್ರಮ ಆರಂಭವಾಗಬೇಕೆಂದು ಜಗನ್ ಆಪ್ತರು ಸಮಯ ನಿಗದಿ ಮಾಡಿದ್ದರು.
ಸಚಿವರಾಗಿರುವ 25 ಮಂದಿಯ ಪೈಕಿ 6 ಮಂದಿ ಅವಿಭಜಿತ ಆಂಧ್ರಪ್ರದೇಶದಲ್ಲಿ ವೈಎಸ್ ರಾಜಶೇಖರ್ ರೆಡ್ಡಿ ಅವರೊಂದಿಗೆ ಸಚಿವರಾಗಿ ಕೆಲಸ ಮಾಡಿದ್ದವರು. ಹಿರಿತನದ ಆಧಾರದಲ್ಲಿ ಜಗನ್ ಪ್ರಮುಖರಿಗೆ ಮಣೆ ಹಾಕಿದ್ದಾರೆ.
ಐವರು ಡಿಸಿಎಂಗಳು
ವರದಿಗಳ ಪ್ರಕಾರ, ರಾಜಣ್ಣ ಡೋರಾ(ಎಸ್ಟಿ, ಸಾಲೂರ್) ಅಲ್ಲಾ ನಾಣಿ (ಕಾಪು ಜನಾಂಗ, ಈಳೂರು)ಪಾರ್ಥ ಸಾರಥಿ (ಯಾದವ, ಪೆನಮಾಲೂರು ವಿಜಯವಾಡಾ ) ಎಂ. ಸುಚರಿತ (ಎಸ್ಟಿ,ಗ ಗುಂಟೂರು)ಅಂಜದ್ ಬಾಷಾ (ಮುಸ್ಲಿಂ, ಕಡಪ) ಅವರಿಗೆ ಉಪಮುಖ್ಯಮಂತ್ರಿ ಹುದ್ದೆಗಳನ್ನು ನೀಡಲಾಗುತ್ತಿದೆ.
ಜಗನ್ ಅವರು ಅಮರಾವತಿಯ ಮುಖ್ಯಮಂತ್ರಿ ಸಚಿವಾಲಯದಲ್ಲಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಅರ್ಚಕರ ಮೂಲಕ ಪೂಜೆ ಸಲ್ಲಿಸಿದರು, ಬಳಿಕ ತಂದೆ, ಮಾಜಿ ಮುಖ್ಯಮಂತ್ರಿ ರಾಜಶೇಖರ್ ರೆಡ್ಡಿ ಅವರ ಭಾವಚಿತ್ರಕ್ಕೆ ನಮಿಸಿದರು.
ಜಗನ್ಮೋಹನ್ ರೆಡ್ಡಿ ಅವರು ಮೇ 30 ರಂದು ಓರ್ವರೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು