ಭದ್ರತಾ ಸಿಬ್ಬಂದಿಗೆ ಮೆಣಸಿನ ಹುಡಿ ಎರಚಿ ಜೈಲಿನಿಂದ ಪರಾರಿಯಾದ ಏಳು ಖದೀಮರು!
Team Udayavani, Jul 13, 2021, 9:35 AM IST
ಗುವಾಹಟಿ: ಜೈಲಿನ ಸಿಬ್ಬಂದಿಗೆ ಹಲ್ಲೆ ಮಾಡಿ, ಅವರ ಮೇಲೆ ಮೆಣಸಿನ ಪುಡಿ ಎರಚಿ ಏಳು ಮಂದಿ ಖದೀಮರು ಜೈಲಿನಿಂದ ಪರಾರಿಯಾದ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ.
ಅರುಣಾಚಲ ಪ್ರದೇಶದ ಪೂರ್ವ ಸಿಯಾಂಗ್ ಜಿಲ್ಲೆಯ ಜೈಲಿನಲ್ಲಿ ರವಿವಾರ ಈ ಘಟನೆ ನಡೆದಿದೆ.
ಜೈಲಿನಿಂದ ಪರಾರಿಯಾದ ಖೈದಿಗಳನ್ನು ಅಭಿಜಿತ್ ಗೊಗೋಯ್, ತಾರೊ ಹಮಾಮ್, ಕಲೋಮ್ ಅಪಾಂಗ್, ತಲುಮ್ ಪನ್ಯಾಂಗ್, ಸುಭಾಶ್ ಮೊಂಡಲ್, ರಾಜ ತಯೆಂಗ್ ಮತ್ತು ದನಿ ಗಮ್ಲಿನಾ ಎಂದು ಗುರುತಿಸಲಾಗಿದೆ. ಈ ಖದೀಮರು ಜೈಲಿನಿಂದ ಪರಾರಿಯಾಗಲು ಮೊದಲು ಯೋಜನೆ ಸಿದ್ದಪಡಿಸಿದ್ದು, ಅದಕ್ಕಾಗಿ ಮೆಣಸಿನ ಹುಡಿ ಮತ್ತು ಉಪ್ಪನ್ನು ಸಂಗ್ರಹಿಸಿಟ್ಟಿದ್ದರು ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಇರಾಕ್ ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಗಢ: 44 ಮಂದಿ ಸಾವು, 67 ಜನರಿಗೆ ಗಾಯ
ರವಿವಾರ ಸಂಜೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ. ಊಟಕ್ಕಾಗಿ ಸೆಲ್ ತೆರೆದಾಗ ಈ ಏಳು ಮಂದಿ ಭದ್ರತಾ ಸಿಬ್ಬಂದಿಗೆ ಹಲ್ಲೆ ನಡೆಸಿ ಜೈಲಿನಿಂದ ಹೊರ ಹೋಗಿದ್ದಾರೆ.
ಐದು ಮಂದಿ ಜೈಲು ಸಿಬ್ಬಂದಿಗೆ ಗಾಯಗಳಾಗಿದೆ. ಅದರಲ್ಲೂ ಓರ್ವನ ತಲೆಗೆ ಗಂಭೀರವಾಗಿ ಏಟಾಗಿದ್ದು, ಆತನ ಮೊಬೈಲ್ ಫೋನನ್ನು ಕೂಡಾ ಖೈದಿಗಳನ್ನು ಕೊಂಡೊಯ್ದಿದ್ದಾರೆ. ಸದ್ಯ ಪರಾರಿಯಾಗಿರುವ ಖೈದಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ