Mangaluru ಕುಕ್ಕರ್ ಬಾಂಬ್ ಕೇಸ್: ಅಫ್ಸರ್ ಪಾಷಾ ಮಾಸ್ಟರ್ ಮೈಂಡ್
ಬಾಂಗ್ಲಾದೇಶದಲ್ಲಿ ಬಾಂಬ್ ತಯಾರಿಸುವ ತರಬೇತಿ...
PTI, Jul 30, 2023, 7:33 PM IST
ನಾಗ್ಪುರ: ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಲಷ್ಕರ್-ಎ-ತೊಯ್ಬಾ ಸಂಘಟನೆಯ ಅಫ್ಸರ್ ಪಾಷಾ ಎಂದು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ಪ್ರಕರಣದ ಆರೋಪಿಗಳಿಗೆ ಕುಕ್ಕರ್ ಬಾಂಬ್ ತಯಾರಿಸುವ ತರಬೇತಿಯನ್ನು ನೀಡಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಈ ಹಿಂದೆ ಬಾಂಗ್ಲಾದೇಶದಲ್ಲಿ ಬಾಂಬ್ ತಯಾರಿಸುವ ತರಬೇತಿ ಪಡೆದಿದ್ದ ಪಾಷಾ, ಮಂಗಳೂರು ಸ್ಫೋಟ ಪ್ರಕರಣದ ಆರೋಪಿಗಳು ಕರ್ನಾಟಕದ ಜೈಲಿನಲ್ಲಿದ್ದಾಗ ಅವರಿಗೆ ತರಬೇತಿ ನೀಡಿದ್ದ.ನಿಷೇಧಿತ ಸಂಘಟನೆ ಪಿಎಫ್ ಐ ಹಿಂದೆ ಪಾಷಾ ಬ್ಯಾಂಕ್ ಖಾತೆಗೆ 5 ಲಕ್ಷ ರೂ.ಗಳನ್ನು ವರ್ಗಾವಣೆ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಪಾಷಾ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಸಮಗ್ರ ವರದಿಯನ್ನು ಸಿದ್ಧಪಡಿಸಿದ್ದಾರೆ. ಅದನ್ನು ದೇಶದ ಗುಪ್ತಚರ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಲಾಗಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆಗಳ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕದ ಜೈಲಿನಿಂದ ಈ ತಿಂಗಳ ಆರಂಭದಲ್ಲಿ ನಗರಕ್ಕೆ ಕರೆತಂದ ನಂತರ ಪಾಷಾನನ್ನು ಪ್ರಸ್ತುತ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎನ್ಐಎ ಮತ್ತು ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಪಾಷಾ ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಎಂಬುದು ಬೆಳಕಿಗೆ ಬಂದಿದೆ. ‘ಮಂಗಳೂರು ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ಗೆ ಕುಕ್ಕರ್ ಬಾಂಬ್ ತಯಾರಿಕೆಯಲ್ಲಿ ತರಬೇತಿ ನೀಡುವಲ್ಲಿ ಪಾಷಾ ಭಾಗಿಯಾಗಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ