ಶತಾಬ್ಧಿ ಪ್ರಯಾಣ ಇನ್ನು ಅಗ್ಗ?
Team Udayavani, Mar 26, 2018, 10:00 AM IST
ಹೊಸದಿಲ್ಲಿ: ಕಡಿಮೆ ಪ್ರಯಾಣಿಕರನ್ನು ಹೊಂದಿರುವ ಕೆಲ ಪ್ರೀಮಿಯಂ ಶತಾಬ್ದ ರೈಲುಗಳ ದರವನ್ನು ಇಳಿಸಲು ರೈಲ್ವೇ ಇಲಾಖೆ ಚಿಂತನೆ ನಡೆಸಿದೆ. ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸುತ್ತಿರುವ ರೈಲ್ವೇ ಇಲಾಖೆ, ಈ ಯೋಜನೆಯನ್ನು ಜಾರಿಗೊಳಿಸಲು ಈಗಾಗಲೇ 25 ಶತಾಬ್ದ ರೈಲುಗಳನ್ನು ಗುರುತಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಡಿಮೆ ದರದಲ್ಲಿ ಪ್ರಯಾಣಿಸುವ ಯೋಜನೆಯನ್ನು ಪ್ರಾಯೋಗಿಕವಾಗಿ ಮೈಸೂರು – ಬೆಂಗಳೂರು, ಜೈಪುರ್- ಅಜ್ಮೀರ್ ಮಾರ್ಗಗಳಲ್ಲಿ ಕಳೆದ ವರ್ಷ ಜಾರಿಗೊಳಿಸಲಾಗಿತ್ತು. ಇದರಿಂದ ಆದಾಯದಲ್ಲಿ ಶೇ.17ರಷ್ಟು ಏರಿಕೆಯಾಗಿತ್ತು. ಅಲ್ಲದೆ, ಪ್ರಯಾಣಿಕರ ಬುಕಿಂಗ್ ಪ್ರಮಾಣ ಕೂಡ ಶೇ.63ರಷ್ಟು ಹೆಚ್ಚಳವಾಗಿತ್ತು. ಚೆನ್ನೈ- ಮೈಸೂರು ರೈಲಲ್ಲೂ ಇದೇ ಮಾದರಿಯನ್ನು ಅನುಸರಿಸಲಾಗಿದ್ದು, ಪರಿಣಾಮ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಬುಕಿಂಗ್ ಪ್ರಮಾಣ ಶೇ.63ರಷ್ಟು ಹೆಚ್ಚಳವಾಗಿತ್ತು. ಇದರ ಯಶಸ್ಸಿನಿಂದ ಪ್ರೇರಣೆಗೊಂಡಿರುವ ಭಾರತೀಯ ರೈಲ್ವೇ ಈ ಯೋಜನೆಯನ್ನು ಕಡಿಮೆ ಪ್ರಯಾಣಿಕರನ್ನು ಹೊಂದಿರುವ ಶತಾಬ್ದಿ ರೈಲುಗಳ ಮಾರ್ಗಗಳಲ್ಲಿ ವಿಸ್ತರಿಸಲು ಮುಂದಾಗಿದೆ. ಖಾಸಗಿ ಬಸ್ಗಳಲ್ಲಿ ಕಡಿಮೆ ದರ ಇದ್ದ ಕಾರಣ ಅಜ್ಮೀರ್ – ಜೈಪುರ ಶತಾಬ್ದಿ ರೈಲಿನಲ್ಲಿ ಹೆಚ್ಚು ಜನ ಪ್ರಯಾಣಿಸುತ್ತಿರಲಿಲ್ಲ. ಹೀಗಾಗಿ ಪ್ರಯಾಣಿಕರನ್ನು ಮತ್ತೆ ಆಕರ್ಷಿಸಲು ಸುಮಾರು 300 ರೂ. ವರೆಗೂ ಟಿಕೆಟ್ ದರವನ್ನು ಇಳಿಸಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಅಷ್ಟೇ ಅಲ್ಲದೆ, ರೈಲು ಸೇವೆಯನ್ನು ಮತ್ತಷ್ಟು ವಿಸ್ತರಿಸಲು ಮುಂದಾಗಿ ರುವ ರೈಲ್ವೇ ಸಚಿವಾಲಯ, ಹೊಸದಾಗಿ 100 ಹೊಸ ರೈಲುಗಳನ್ನು ಓಡಿಸಲು ಮುಂದಾಗಿದೆ. ಈಗಾಗಲೇ 25 ಹೊಸ ರೈಲುಗಳನ್ನು ಪರಿಚಯಿಸಲಾಗಿದ್ದು, ಉಳಿದವುಗಳನ್ನು ಈ ವರ್ಷವೇ ಓಡಿಸಲು ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು