ದೆಹಲಿ ಜಾಮಾ ಮಸೀದಿಗೆ ಮಹಿಳೆಯರ ಪ್ರವೇಶ ನಿಷೇಧ; ಮಹಿಳಾ ಆಯೋಗ ನೋಟಿಸ್
ಏಕಾಂಗಿಯಾಗಿ ಭೇಟಿ ನೀಡಲು....
Team Udayavani, Nov 24, 2022, 3:38 PM IST
ನವದೆಹಲಿ : ಜಾಮಾ ಮಸೀದಿ ಆಡಳಿತವು ಮಸೀದಿಯ ಹೊರಗೆ ಎಚ್ಚರಿಕೆ ಫಲಕಗಳನ್ನು ಹಾಕಿದ್ದು, ಮಹಿಳೆಯರಿಗೆ ಒಳಗೆ ಪ್ರವೇಶವಿಲ್ಲ ಎಂದು ಬರೆಯಲಾಗಿದೆ. ಮಸೀದಿಯ ಮೂರು ಪ್ರವೇಶದ್ವಾರಗಳ ಹೊರಗೆ ಫಲಕಗಳನ್ನು ಹಾಕಲಾಗಿದೆ.
“ಹೆಣ್ಣುಮಕ್ಕಳು ಮತ್ತು ಮಹಿಳೆಯರು ಜಮಾ ಮಸೀದಿಯನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ” ಎಂದು ಫಲಕಗಳನ್ನು ಹಾಕಲಾಗಿದೆ. ಈ ಕ್ರಮವು ಹಲವಾರು ಭಾಗಗಳಿಂದ ತೀಕ್ಷ್ಣವಾದ ಪ್ರತಿಕ್ರಿಯೆಯನ್ನು ಹುಟ್ಟುಹಾಕಿದೆ. ಇದನ್ನು “ಮೂಲಭೂತವಾದಿ ಮನಸ್ಥಿತಿ” ಎಂದು ಕರೆಯಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್, ಜಾಮಾ ಮಸೀದಿಯ ಇಮಾಮ್ಗೆ ನೋಟಿಸ್ ಜಾರಿ ಮಾಡಲಾಗಿದ್ದು, “ಈ ರೀತಿಯ ಮಹಿಳೆಯರ ಪ್ರವೇಶವನ್ನು ನಿಷೇಧಿಸುವ ಹಕ್ಕು ಯಾರಿಗೂ ಇಲ್ಲ” ಎಂದು ಹೇಳಿದ್ದಾರೆ.
“ಜಾಮಾ ಮಸೀದಿಗೆ ಮಹಿಳೆಯರ ಪ್ರವೇಶವನ್ನು ನಿಲ್ಲಿಸುವ ನಿರ್ಧಾರವು ಸಂಪೂರ್ಣವಾಗಿ ತಪ್ಪು, ಪುರುಷನಿಗೆ ಪೂಜೆ ಮಾಡುವ ಹಕ್ಕಿದೆ, ಮಹಿಳೆಗೂ ಇದೆ, ನಾನು ಜಾಮಾ ಮಸೀದಿಯ ಇಮಾಮ್ಗೆ ನೋಟಿಸ್ ನೀಡುತ್ತಿದ್ದೇನೆ”ಎಂದು ಡಿಸಿಡಬ್ಲ್ಯು ಮುಖ್ಯಸ್ಥರು ಟ್ವೀಟ್ ಮಾಡಿದ್ದಾರೆ.
ವಿಶ್ವ ಹಿಂದೂ ಪರಿಷತ್ ಕೂಡ ಈ ನಿರ್ಧಾರವನ್ನು ಟೀಕಿಸಿದ್ದು, ಇದನ್ನು “ಮಹಿಳಾ ವಿರೋಧಿ” ಎಂದು ಕರೆದಿದೆ. ಈ ಪ್ರಕರಣದಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಕೇಳಿಕೊಂಡಿದೆ.
ಒಂಟಿಯಾಗಿ ಬರುವ ಮಹಿಳೆಗೆ ನಿಷೇಧ
”ಮಹಿಳೆಯರ ಪ್ರವೇಶವನ್ನು ನಿಷೇಧಿಸಿಲ್ಲ. ಮಹಿಳೆಯರು ಒಂಟಿಯಾಗಿ ಬಂದಾಗ-ಅನುಚಿತ ಕೃತ್ಯಗಳು ನಡೆಯಬಾರದು, ವಿಡಿಯೋ ಚಿತ್ರೀಕರಣ ನಿಷೇಧವಿದೆ. ಇದನ್ನು ತಡೆಯಲು ಕುಟುಂಬದವರೊಂದಿಗೆ ಬರುವ, ವಿವಾಹಿತ ದಂಪತಿಗಳ ಮೇಲೆ ಯಾವುದೇ ನಿರ್ಬಂಧಗಳಿಲ್ಲ. ಧಾರ್ಮಿಕ ಸ್ಥಳಗಳವನ್ನು ಸಭೆಯ ಸ್ಥಳವನ್ನಾಗಿ ಮಾಡುವುದು ಸೂಕ್ತವಲ್ಲ” ಎಂದು ಜಾಮಾ ಮಸೀದಿಯ ಪಿಆರ್ ಓ ಸಬೀವುಲ್ಲಾ ಖಾನ್ ಹೇಳಿದ್ದಾರೆ. ಮಸೀದಿ ಆಡಳಿತದ ಪ್ರಕಾರ ಮಹಿಳೆಯರಿಗೆ ತಮ್ಮ ಪತಿ ಅಥವಾ ಕುಟುಂಬದೊಂದಿಗೆ ಮಸೀದಿಯನ್ನು ಪ್ರವೇಶಿಸಲು ಅನುಮತಿ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್