ಮೋದಿ ಸರಕಾರದಡಿ ಮುಸ್ಲಿಮರ ಸ್ಥಿತಿ ದಯನೀಯ: ರಾಹುಲ್ಗೆ ಬುಖಾರಿ ಪತ್ರ
Team Udayavani, Jul 30, 2018, 3:48 PM IST
ಹೊಸದಿಲ್ಲಿ : ದಿಲ್ಲಿಯ ಜಾಮಾ ಮಸೀದಿಯ ಇಮಾಮ್ ಬುಖಾರಿ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು “ದೇಶದಲ್ಲಿ ಮುಸ್ಲಿಮರ ವಿರುದ್ಧ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ನಿಮ್ಮ ಪಕ್ಷದ ನಿಲುವೇನು? ಎಂಬುದನ್ನು ಸ್ಪಷ್ಟಪಡಿಸಿ” ಎಂದು ಆಗ್ರಹಿಸಿದ್ದಾರೆ.
‘ಕಳೆದ ಏಳು ದಶಕಗಳಲ್ಲೇ ಈಗ ಪ್ರಧಾನಿ ಮೋದಿ ಸರಕಾರದಡಿ ದೇಶದಲ್ಲಿನ ಮುಸ್ಲಿಮರ ಸ್ಥಿತಿ ದಯನೀಯವಾಗಿದೆ’ ಎಂದು ಬುಖಾರಿ ದೂರಿದ್ದಾರೆ.
“ದೇಶದ ವಿವಿಧೆಡೆ ನಡೆದಿರುವ ಹೊಡೆದು ಸಾಯಿಸುವ ಗುಂಪು ಹಿಂಸೆಗೆ 64 ಅಮಾಯಕ ಮುಸ್ಲಿಮರು ಬಲಿಯಾಗಿದ್ದಾರೆ. ನಮ್ಮನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವ ಸರಕಾರದ ವಿರುದ್ಧ ನಿಮ್ಮ ಧ್ವನಿ ಎಲ್ಲಿದೆ?” ಎಂದು ಇಮಾಮ್ ಬುಖಾರಿ ಅವರು ರಾಹುಲ್ ಗಾಂಧಿಯನ್ನು ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ.
“ದೇಶದಲ್ಲಿಂದು ಮುಸ್ಲಿಮ್ ಯುವರಿಕರಿಗೆ ಗಡ್ಡ ಬಿಟ್ಟು ತಲೆಗೆ ಶ್ವೇತ ವಸ್ತ್ರ ತೊಟ್ಟು ರಸ್ತೆಯಲ್ಲಿ ನಡೆದುಕೊಂಡು ಹೋಗುವುದೇ ಕಷ್ಟ ಎಂಬಂತಹ ಸ್ಥಿತಿ ತಲೆದೋರಿದೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿರುವ ನೀವು ಸರಕಾರದ ಮೇಲೆ ಈ ಬಗ್ಗೆ ಒತ್ತಡ ಹೇರುವುದನ್ನು ನಾವು ನಿರೀಕ್ಷಿಸುತ್ತೇವೆ” ಎಂದು ಬುಖಾರಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಮುಸ್ಲಿಮರ ಪಕ್ಷ ಎಂದು ರಾಹುಲ್ ಗಾಂಧಿ ಈಚೆಗೆ ಹೇಳಿದುದನ್ನು ಉರ್ದು ದೈನಿಕವೊಂದು ವರದಿ ಮಾಡಿತ್ತು. ಇದನ್ನು ಉಲ್ಲೇಖೀಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು “ಕಾಂಗ್ರೆಸ್ ಪಕ್ಷ ಮುಸ್ಲಿಮ್ ಪುರುಷದ್ದು ಮಾತ್ರವೇ ಅಥವಾ ಮುಸ್ಲಿಮ್ ಮಹಿಳೆಯರ ಪಕ್ಷವೂ ಆಗಿದೆಯೇ’ ಎಂದು ಪ್ರಶ್ನಿಸಿದ್ದರು. ಕಾಂಗ್ರೆಸ್ ಪಕ್ಷ ಮುಸ್ಲಿಮ್ ಮಹಿಳೆಯರ ಪಕ್ಷ ಅಲ್ಲ ಎನ್ನುವುದು ತ್ರಿವಳಿ ತಲಾಕ್ ವಿಷಯದಲ್ಲಿ ಬಹಿರಂಗವಾಗಿದೆ ಎಂದು ಮೋದಿ ಹೇಳಿದ್ದರು.
ಈ ವಿವಾದದ ಹಿನ್ನೆಲೆಯಲ್ಲಿ ಈಗ ಬುಖಾರಿ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?