Jammu-Kashmir Road Mishap: 7 ಮಂದಿ ಮೃತ್ಯು, ಓರ್ವ ಗಂಭೀರ ಗಾಯ
Team Udayavani, May 24, 2023, 11:14 AM IST
ಕಿಶ್ತ್ವಾರ್ (ಜಮ್ಮು – ಕಾಶ್ಮೀರ): ಪಾಕಲ್ ದುಲ್ ಪ್ರಾಜೆಕ್ಟ್ನ ಕ್ರೂಸರ್ ವಾಹನವು ಜಮ್ಮು-ಕಾಶ್ಮೀರದ ಕಿಶ್ತ್ವಾರ್ನಲ್ಲಿ ಅಪಘಾತಕ್ಕೀಡಾಗಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಂಗದೂರು ಅಣೆಕಟ್ಟು ಸಮೀಪ ಬುಧವಾರ (ಮೇ24) ನಡೆದಿದೆ.
ಅಧಿಕಾರಿಗಳ ಪ್ರಕಾರ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ, ಓರ್ವ ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕಿಶ್ತ್ವಾ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಕಿಶ್ತ್ವಾರ್ ಉಪ ಆಯುಕ್ತ ಡಾ.ದೇವಾಂಶ್ ಯಾದವ್ ತಿಳಿಸಿದ್ದಾರೆ.
ಕೇಂದ್ರ ವಿಜ್ಞಾನ ಹಾಗೂ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ರಸ್ತೆ ಅಪಘಾತದ ಬಗ್ಗೆ ಡಿಸಿ ಯಾದವ್ ಅವರೊಂದಿಗೆ ಮಾತನಾಡಿದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ...