ಜಮ್ಮು-ಕಾಶ್ಮೀರ; 50 ಸಾವಿರ ಯುವಕರಿಗೆ ಸರಕಾರಿ ನೌಕರಿ; ರಾಜ್ಯಪಾಲ ಮಲಿಕ್ ಘೋಷಣೆ
Team Udayavani, Aug 28, 2019, 6:26 PM IST
ಜಮ್ಮು-ಕಾಶ್ಮೀರ:ಜಮ್ಮು-ಕಾಶ್ಮೀರದ 50 ಸಾವಿರ ಯುವಕರಿಗೆ ಸರಕಾರಿ ಉದ್ಯೋಗ ನೀಡಲಾಗುವುದು ಎಂದು ರಾಜ್ಯಪಾಲ ಸತ್ಯಪಾಲ್ ಮಲಿಕ್ ಬುಧವಾರ ಘೋಷಿಸಿದ್ದಾರೆ. ಈ ಕೆಲಸದಲ್ಲಿ ಯುವಕರು ಪೂರ್ಣ ಪ್ರಮಾಣದಲ್ಲಿ ಉತ್ಸಾಹದಲ್ಲಿ ತೊಡಗಿಕೊಳ್ಳಬೇಕು. ಮುಂದಿನ 2-3 ತಿಂಗಳಲ್ಲಿಯೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪರಂಪರೆಯನ್ನು ನಾವು ರಕ್ಷಿಸುವುದಾಗಿ ಭರವಸೆ ನೀಡುತ್ತೇವೆ. ನಾವು ಯಾವುದೇ ಮಾಹಿತಿಯನ್ನು ಮುಚ್ಚಿಡುತ್ತಿಲ್ಲ. ಕಲ್ಲೆಸೆತದಿಂದ ಗಾಯಗೊಂಡಿರುವ ಪ್ರತಿಯೊಂದು ಘಟನೆಯನ್ನು ವರದಿ ಮಾಡಿದ್ದೇವೆ. ಈವರೆಗೂ ಯಾರೊಬ್ಬರ ಪ್ರಾಣಹಾನಿ ಸಂಭವಿಸಿಲ್ಲ. ಪ್ರತಿದಿನ ಕೇಂದ್ರ ಸರಕಾರ ನನ್ನ ಜೊತೆ ಮಾಹಿತಿ ಪಡೆಯುತ್ತಿದೆ ಎಂದು ಗವರ್ನರ್ ತಿಳಿಸಿದರು.
ಕಣಿವೆ ರಾಜ್ಯದ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಪ್ರತಿ ಜಿಲ್ಲೆಯಲ್ಲೂ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಘೋಷಿಸಿದರು. ಕಾಶ್ಮೀರದ ಕುಪ್ವಾರ ಹಾಗೂ ಹಂದ್ವಾರ ಜಿಲ್ಲೆಗಳಲ್ಲಿ ಮೊಬೈಲ್ ಫೋನ್ ಸಂಪರ್ಕ ನೀಡಲಾಗಿದೆ. ಅದೇ ರೀತಿ ಉಳಿದ ಜಿಲ್ಲೆಗಳ ಮೊಬೈಲ್ ಸಂಪರ್ಕ ಶೀಘ್ರವೇ ನೀಡಲಾಗುವುದು ಎಂದರು.
ಜಮ್ಮು-ಕಾಶ್ಮೀರದ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವನ್ನೂ ಇನ್ನೂ ಸ್ಪಷ್ಟಪಡಿಸಿಲ್ಲ ಎಂದ ರಾಜ್ಯಪಾಲ ಮಲಿಕ್, ರಾಹುಲ್ ಗಾಂಧಿ ರಾಜಕೀಯದಲ್ಲಿ ಇನ್ನೂ ಅಪ್ರಬುದ್ಧ ಎಂಬ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ