ಜಮ್ಮು-ಕಾಶ್ಮೀರ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗ
Team Udayavani, Feb 26, 2020, 9:12 PM IST
ಜಿನೆವಾ: ಜಮ್ಮು-ಕಾಶ್ಮೀರ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯಲಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯದ ಪಶ್ಚಿಮ ವಿಭಾಗದ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಹೇಳಿದ್ದಾರೆ. ಪಾಕಿಸ್ತಾನದ ಮಾನವ ಹಕ್ಕು ಸಚಿವ, ಕಾಶ್ಮೀರ ವಿಚಾರದಲ್ಲಿ ಅಂತಾರಾಷ್ಟ್ರೀಯ ಸಮುದಾಯ ಮಧ್ಯಪ್ರವೇಶಿಸಬೇಕು ಎಂದು ವಿಶ್ವಸಂಸ್ಥೆಯ 43ನೇ ಮಾನವಹಕ್ಕುಗಳ ಅಧಿವೇಶನದಲ್ಲಿ ಒತ್ತಾಯಿಸಿದ ಬೆನ್ನಲ್ಲೇ ಸ್ವರೂಪ್ ಮೇಲಿನ ಪ್ರತಿಕ್ರಿಯೆ ನೀಡಿದ್ದಾರೆ.
ಪಾಕಿಸ್ತಾನದ ವಿರುದ್ಧ ವಾಗ್ಧಾಳಿ ನಡೆಸಿದ ಸ್ವರೂಪ್, ಪಾಕಿಸ್ತಾನ ವಿಶ್ವದಲ್ಲೇ ಭಯೋತ್ಪಾದನೆ ಮತ್ತು ಹಿಂಸೆಯನ್ನು ರಫ್ತು ಮಾಡುವ ಅಗ್ರರಾಷ್ಟ್ರ ಎನಿಸಿಕೊಂಡಿದೆ. ಅದು ಬೇರೆಯವರಿಗೆ ಉಪದೇಶ ಮಾಡುವುದನ್ನು ಬಿಟ್ಟು ತನ್ನ ಪರಿಸ್ಥಿತಿ ಅದರಲ್ಲೂ ತನ್ನ ದೇಶದ ಅಲ್ಪಸಂಖ್ಯಾತರ ಪರಿಸ್ಥಿತಿಯನ್ನು ಮೊದಲು ಸುಧಾರಿಸಬೇಕು ಎಂದಿದ್ದಾರೆ.
ಜಮ್ಮು ಕಾಶ್ಮೀರವನ್ನು ವಿಭಜಿಸಿ ಕೇಂದ್ರಾಡಳಿತ ಪ್ರದೇಶ ಮಾಡಿರುವುದು ಭಾರತದ ಆಂತರಿಕ ವಿಚಾರ. ಸದ್ಯ ಜಮ್ಮು ಕಾಶ್ಮೀರದ ಮೇಲೆ ಹೇರಿರುವ ಎಲ್ಲ ನಿರ್ಬಂಧಗಳು ತಾತ್ಕಾಲಿಕ ಈಗಾಗಲೇ ಪರಿಸ್ಥಿತಿ ಪೂರ್ಣ ನಿಯಂತ್ರಣಕ್ಕೆ ಬಂದಿದೆ ಎಂದು ಸ್ವರೂಪ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ