ಅನಂತ್ನಾಗ್:ಕುಖ್ಯಾತ ಕಲ್ಲು ತೂರಾಟಗಾರನ ಹತ್ಯೆ;ಚೀನಾ ಗ್ರೆನೇಡ್ ವಶ
Team Udayavani, Aug 4, 2017, 9:21 AM IST
ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಕನಿಬಾಲ್ ಬಿಜ್ ಬೆಹಾರ ಎಂಬಲ್ಲಿ ಗುರುವಾರ ರಾತ್ರಿ ಯಿಂದ ಸೇನಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಯಿದೀನ್ ಉಗ್ರನೊಬ್ಬನನ್ನು ಹತ್ಯೆಗೈಯಲಾಗಿದೆ. ಇದೇ ವೇಳೆ ಜೊತೆಯಲ್ಲಿದ್ದ ಇನ್ನಿಬ್ಬರು ಉಗ್ರರು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.
ನಡು ರಾತ್ರಿ ಉಗ್ರರನ್ನು ಗುರಿಯಾಗಿಸಿ ನಡೆಸುತ್ತಿದ್ದ ಗುಂಡಿನ ಚಕಮಕಿಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಅಪರಿಚಿತನೊಬ್ಬ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಹತ್ಯೆಗೀಡಾದ ಉಗ್ರನ ಬಳಿ ಚೀನಾ ಹ್ಯಾಂಡ್ ಗ್ರೆನೇಡ್ , ಎಸ್ಎಲ್ಆರ್ ಬಂದೂಕು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ. ಗುಂಡಿನ ಚಕಮಕಿಯಲ್ಲಿ ರಾಷ್ಟ್ರೀಯ ರೈಫಲ್ಸ್ನ ಯೋಧನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹತ್ಯೆಗೀಡಾದ ಉಗ್ರ ಯಾವಾರ್ ನಿಸಾರ್ ಶೇರ್ಗುರಿ ಎಂದು ಗುರುತಿಸಲಾಗಿದ್ದು ಅನಂತ್ನಾಗ್ನ ನಿವಾಸಿಯಾಗಿದ್ದ. ಈತ ಈ ಪ್ರದೇಶದಲ್ಲಿ ಕುಖ್ಯಾತ ಕಲ್ಲು ತೂರಾಟಗಾರನಾಗಿದ್ದ. ಈತನ ಬಳಿ ಪತ್ತೆಯಾಗಿರುವ ಎಸ್ಎಲ್ಆರ್ ಗನ್ ಪೊಲೀಸ್ ಸಿಬಂದಿಯಿಂದ ಲೂಟಿಗೈದದ್ದು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ