ಪುಲ್ವಾಮಾ ಎನ್ಕೌಂಟರ್: ಭದ್ರತಾ ಪಡೆಯಿಂದ ಎಲ್ಇಟಿ ಉಗ್ರನ ಹತ್ಯೆ
Team Udayavani, Aug 7, 2017, 10:37 AM IST
ಶ್ರೀನಗರ : ಇಂದು ಸೋಮವಾರ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಲಷ್ಕರ್ ಎ ತಯ್ಯಬ ಉಗ್ರ ಸಂಘಟನೆಯ ಭಯೋತ್ಪಾದಕನೋರ್ವ ಹತನಾಗಿದ್ದಾನೆ.
ಹತನಾದ ಉಗ್ರರು ಅಬು ಇಸ್ಮಾಯಿಲ್ ಉಗ್ರ ಸಮೂಹಕ್ಕೆ ಸೇರಿದವನೆಂದು ಗುಪ್ತಚರ ಮೂಲಗಳು ತಿಳಿಸಿವೆ
ಸಂಬೂರಾ ಗ್ರಾಮದಲ್ಲಿ ಕೆಲವು ಎಲ್ಇಟಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಸುಳಿವನ್ನು ಅನುಸರಿಸಿ ಭದ್ರತಾ ಪಡೆಗಳು ಭಾನುವಾರ ರಾತ್ರಿಯಿಂದಲೇ ಶಂಕಿತ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಭದ್ರತಾ ಪಡೆಗಳ ಎನ್ಕೌಂಟರ್ ತಾಣದಲ್ಲಿ ಉಗ್ರರಾದ ಲೇಲ್ಹಾರ್ ಪುಲ್ವಾಮಾದ ಅಯೂಬ್ ಲೇಲ್ಹಾರಿ ಮತ್ತು ರೆಹಮಾನ್ ನಾಲ್ಕೂ ಕಡೆಗಳಿಂದ ಸುತ್ತುವರಿಯಲ್ಪಟ್ಟಿದ್ದರು. ಆಗ ಅಡಗಿಕೊಂಡಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿಯನ್ನು ಆರಂಭಿಸಿದರು.
ಗುಂಡಿನ ಕಾಳಗದಲ್ಲಿ ಒಬ್ಬ ಎಲ್ಇಟಿ ಉಗ್ರ ಹತನಾದ. ಆತ ಯಾವ ಉಗ್ರ ಸಮೂಹಕ್ಕೆ ಸೇರಿದವನು ಮತ್ತು ಆತನ ಗುರುತು ವಿವರಗಳೇನು ಎಂಬುದನ್ನು ಜಾಲಾಡಲಾಯಿತು.
ಪುಲ್ವಾಮಾ ಜಿಲ್ಲೆಯಲ್ಲಿ ಪ್ರಕ್ಷುಬ್ಧ ಪ್ರದೇಶದಲ್ಲಿ ಕಾನೂನು ಮತ್ತು ಶಿಸ್ತನ್ನು ಕಾಪಿಡಲು ಭದ್ರತಾ ಅಧಿಕಾರಿಗಳು ಇಂಟರ್ನೆಟ್ ಸೇವೆಯನ್ನು ಬ್ಲಾಕ್ ಮಾಡಿದ್ದಾರೆ ಎಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು