ಕಾಶ್ಮೀರದಲ್ಲಿ ಭಾರೀ ಹಿಮಪಾತ : ಜಮ್ಮು -ಶ್ರೀನಗರ ಹೆದ್ದಾರಿ ಬಂದ್
Team Udayavani, Jan 11, 2019, 5:43 AM IST
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗಿದ್ದು ಜನಜೀವನಕ್ಕೆ ತೀವ್ರ ಬಾಧಿತವಾಗಿದೆ. ಶುಕ್ರವಾರ ಶ್ರೀನಗರದಲ್ಲಿ – 1.0 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಪಹಲ್ಗಾಮ್ನಲ್ಲಿ – 3.0 ಮತ್ತು ಗುಲ್ಮಾರ್ಗ್ನಲ್ಲಿ ಕನಿಷ್ಠ – 7.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಹಿಮ ವಿಪರೀತ ಪ್ರಮಾಣದಲ್ಲಿ ಸುರಿಯುತ್ತಿರುವ ಕಾರಣ ಜಮ್ಮು ಮತ್ತು ಶ್ರೀಗರ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಜವಹಾರ್ ಸುರಂಗದಲ್ಲಿ ಸಂಚಾರ ಅಸಾಧ್ಯವಾಗಿದೆ ಎಂದು ವರದಿಯಾಗಿದೆ.
ಗುರುವಾರ ಹೆದ್ದಾರಿಯಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಶ್ರೀನಗರದಿಂದ ಜಮ್ಮು ಕಡೆಗೆ ವಾಹನಗಳು ಸಂಚರಿಸಿದ್ದವು.
ಮುಂದಿನ 72 ಗಂಟೆಗಳ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಹವಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ದ್ರಾಸ್ ಪ್ರದೇಶದಲ್ಲಿ – 15.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಜಮ್ಮು ನಗರದಲ್ಲಿ 8.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕತ್ರಾದಲ್ಲಿ 7.8, ಬಟೊಟೆಯಲ್ಲಿ 1.5, ಬನ್ನಿಹಾಲ್ನಲ್ಲಿ 2.1 ಮತ್ತು ಬದೆರ್ವಾಹದಲ್ಲಿ 0.4 ತಾಪಮಾನ ದಾಖಲಾಗಿದೆ.
ಜನವರಿ 31 ರ ವರೆಗೆ ಕಾಶ್ಮೀರದಲ್ಲಿ ಕಠಿಣ ದಿನಗಳು ಎದುರಾಗಿದ್ದು ಆ ಬಳಿಕ ಹಿಮಪಾತ ಕಡಿಮೆಯಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್