ಫಾಸ್ಟ್ ಟ್ಯಾಗ್ ಅಳವಡಿಕೆ ಅವಧಿ ವಿಸ್ತರಣೆ :ಜನವರಿ 15 ಕೊನೆ ದಿನ


Team Udayavani, Dec 14, 2019, 9:20 PM IST

fastag

ಹೊಸದಿಲ್ಲಿ: ಫಾಸ್ಟಾಗ್‌ ಅಳವಡಿಕೆ ಕಡ್ಡಾಯ ಅವಧಿಯನ್ನು ಕೇಂದ್ರ ಸರಕಾರವು ಜ.15ರ ವರೆಗೆ ವಿಸ್ತರಿಸಿದೆ. ಸ್ಟಿಕ್ಕರ್‌ಗಳ ಅಭಾವದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಗಿದೆ. ಆದರೂ ಎಲ್ಲ ಟೋಲ್‌ಗ‌ಳ ಶೇ.75ರಷ್ಟು ಮಾರ್ಗಗಳಲ್ಲಿ ಫಾಸ್ಟಾಗ್‌ ಮೂಲಕ ಶುಲ್ಕ ಪಡೆಯಬೇಕು. ಉಳಿದ ಶೇ.25 ಲೇನ್‌ಗಳಲ್ಲಿ ನಗದು ಪಡೆದು ವಾಹನ ಬಿಡಬಹುದು ಎಂದಿದೆ. ಹಾಗಾಗಿ ರವಿವಾರದಿಂದ ಫಾಸ್ಟಾಗ್‌ ಹೊಂದಿರದಿದ್ದರೆ ದುಪ್ಪಟ್ಟು ಹಣ ಪಾವತಿಸಬೇಕೆಂಬ ಆತಂಕದಿಂದ ಜನ ದೂರವಾದಂತಾಗಿದೆ.

ಹೇಗೆ ಕಾರ್ಯನಿರ್ವಹಿಸುತ್ತದೆ
ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫೀಕೇಶನ್‌ (ಆರ್‌ಎಫ್ಐಡಿ) ಎನ್ನುವ ತಂತ್ರಜ್ಞಾನ ಸಹಾಯದೊಂದಿಗೆ ಕಾರ್ಯನಿರ್ವಹಿಸುವ ಪುಟ್ಟ ಸ್ಟಿಕ್ಕರ್‌ಗಳನ್ನು 4 ಚಕ್ರ ಅಥವಾ ಅದಕ್ಕೂ ಮೀರಿದ ಯಾವುದೇ ವಾಹನಗಳ ಮುಂಭಾಗದ ಗಾಜಿನ ಬಳಿ ಅಳವಡಿಸಲಾಗುತ್ತದೆ.

ಟೋಲ್‌ ಪ್ಲಾಜಾದಲ್ಲಿರುವ ಫಾಸ್ಟಾಗ್‌ಲೇನ್‌ ಮೂಲಕ ಹಾದು ಹೋದಾಗ ಸ್ವಯಂಚಾಲಿತವಾಗಿ ಆಗಿ ಸ್ಕ್ಯಾನ್‌ ಆಗುತ್ತದೆ. ಇದೇ ವೇಳೆ ಫಾಸ್ಟಾಗ್‌ ಖಾತೆಯಿಂದ ಶುಲ್ಕ ಸಂದಾಯವಾಗುತ್ತದೆ. ಇದರ ನೋಟಿಫಿಕೇಶನ್‌ ಮೊಬೈಲ್‌ಗ‌ಳಿಗೆ ಎಸ್‌ಎಂಎಸ್‌ ಮೂಲಕ ಬರುತ್ತದೆ. ಈ ವ್ಯವಸ್ಥೆಯಲ್ಲಿ ವಾಹನಗಳು ಸಾಲಲ್ಲಿ ನಿಂತು, ಹಣ ಸಂದಾಯ ಮಾಡಿ, ರಶೀದಿ ಪಡೆಯುವ ಅಗತ್ಯ ಇಲ್ಲ.

ಹೊಸ ನಿಯಮ ಏನು?
ದೇಶದ ಎಲ್ಲಾ ಟೋಲ್‌ಗ‌ಳಲ್ಲಿ ಫಾಸ್ಟಾಗ್‌ ಲೇನ್‌ಗಳನ್ನು ಅಳವಡಿಸಲಾಗುತ್ತದೆ. ಅದರ ಮೂಲಕವೇ ವಾಹನಗಳು ಸಂಚರಿಸಬೇಕಾಗಿದ್ದು, ಟೋಲ್‌ ವೆಚ್ಚವನ್ನು ಫಾಸ್ಟಾಗ್‌ ಮೂಲಕ ಪಾವತಿಸಬೇಕಾಗುತ್ತದೆ. ಒಂದು ವೇಳೆ ಫಾಸ್ಟಾಗ್‌ ವ್ಯವಸ್ಥೆ ಅಳವಡಿಸದೇ ಇದ್ದ ವಾಹನವಾದರೆ ಟೋಲ್‌ ಮೊತ್ತದ ದುಪ್ಪಟ್ಟು ಹಣ ಪಾವತಿಸಬೇಕಾಗುತ್ತದೆ. ಟೋಲ್‌ನ ಒಂದು ಕಡೆ ಮಾತ್ರ ಫಾಸ್ಟಾಗ್‌ ಮತ್ತು ಇತರ ಪಾವತಿ ವ್ಯವಸ್ಥೆಗಳನ್ನು ಅಳವಡಿಸಲಾಗುತ್ತದೆ. ಇಲ್ಲಿ ಫಾಸ್ಟಾಗ್‌ ಇಲ್ಲದ ವಾಹನಗಳು ಸರತಿ ಸಾಲಿನಲ್ಲಿ ಕಾಯಬೇಕಾಗಿ ಬರುತ್ತದೆ. ಉಳಿದ ಎಲ್ಲಾ ಲೇನ್‌ ಗಳಲ್ಲಿ (ಪಥ) ಫಾಸ್ಟಾಗ್‌ಗಳು ಮಾತ್ರ ಇರಲಿವೆ.

ಏನು ಲಾಭ?
ಈ ಫಾಸ್ಟಾಗ್‌ ವ್ಯವಸ್ಥೆಯ ಮೂಲ ಉದ್ದೇಶವೇ ಟೋಲ್‌ಗ‌ಳಲ್ಲಿ ಕ್ಯಾಶ್‌ಲೆಸ್‌ ಪೇಮೆಂಟ್‌ ಅನ್ನು ಉತ್ತೇಜಿಸುವುದು. ವಾಹನ ದಟ್ಟನೆಯನ್ನು ಕಡಿತಗೊಳಿಸುವುದು ಇದರ ಮತ್ತೂಂದು ಉದ್ದೇಶವಾಗಿದೆ. ಸರಕಾರ ಫಾಸ್ಟಾಗ್‌ ವಾಹನಗಳಿಗೆ ಶೇ. 2.5 ರಿಯಾಯಿತಿಯನ್ನು ನೀಡುತ್ತದೆ.

ಫಾಸ್ಟಾಗ್‌ ಎಂಬುದಕ್ಕೆ ನೀವು ರಿಚಾರ್ಜ್‌ ಮಾಡಿಸಿಕೊಳ್ಳುವ ಅಗತ್ಯ ಇಲ್ಲ. ಏಕೆಂದರೆ ಇದು ನೇರವಾಗಿ ನಿಮ್ಮ ಬ್ಯಾಂಕ್‌ ಖಾತೆಗೆ ಲಿಂಕ್‌ ಆಗಿರುವುದರಿಂದ ನಿಮ್ಮ ಖಾತೆಯಿಂದಲೇ ಹಣ ಸಂದಾಯವಾಗುತ್ತದೆ. ನೀವು ನಿಮ್ಮ ಬ್ಯಾಂಕ್‌ ಖಾತೆಯಲ್ಲಿ ಹಣವನ್ನು ಕಾಯ್ದುಕೊಂಡರೆ ಸಾಕು.

ಆದರೆ ನೀವು ನಿಮ್ಮ ಫಾಸ್ಟಾಗ್‌ ಅನ್ನು ಎನ್‌ಎಚ್‌ಐನ ವ್ಯಾಲೆಟ್‌ಗೆ ಲಿಂಕ್‌ ಮಾಡಿದ್ದರೆ ನೀವು ಆ ವ್ಯಾಲೆಟ್‌ ಅನ್ನು ಇತರ ಪೇಮೆಂಟ್‌ ವ್ಯವಸ್ಥೆಯ ಮೂಲಕ ರೀಚಾರ್ಜ್‌ ಮಾಡಿಸಿಕೊಳ್ಳಬೇಕು. ಪ್ರತಿಯೊಂದು ವ್ಯವಹಾರ ಹಾಗೂ ಬ್ಯಾಲೆನ್ಸ್‌ ಕಡಿಮೆಯಾದಾಗ ಗ್ರಾಹಕರಿಗೆ ಮೊಬೈಲ್‌ ಎಸ್‌ಎಂಎಸ್‌ ಸಂದೇಶ ರವಾನೆಯಾಗಲಿದೆ.

ಫಾಸ್ಟಾಗ್‌ ಕಡ್ಡಾಯದ ಗಡುವು ವಿಸ್ತರಣೆಯಾಗಿದ್ದು, ಜನರು ಟೋಲ್‌ ಕೇಂದ್ರಗಳಲ್ಲಿ ಕೊಂಡುಕೊಳ್ಳುತ್ತಿದ್ದಾರೆ. ಇದೀಗ ಡಿಸೆಂಬರ್‌ 15ರ ಗಡುವು ದಾಟಿದ ಬಳಿಕ ಯಾವುದೇ ರಿಯಾಯಿತಿಗಳು ಇರುವುದಿಲ್ಲ, ಮಾತ್ರವಲ್ಲದೇ ದುಪ್ಪಟ್ಟು ದಂಡವನ್ನು ಪಾವತಿಸಬೇಕಾಗುತ್ತದೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.