ಜಯಲಲಿತಾ ಸಾವಿನ ತನಿಖೆ: ಶಶಿಕಲಾ, ಅಪೋಲೊ ಆಸ್ಪತ್ರೆಗೆ ಸಮನ್ಸ್
Team Udayavani, Dec 23, 2017, 12:36 PM IST
ಚೆನ್ನೈ : ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ದಿ| ಜೆ ಜಯಲಲಿತಾ ಅವರ ಶಂಕಾಸ್ಪದ ಸಾವಿನ ಏಕ ಸದಸ್ಯ ತನಿಖಾ ಆಯೋಗ, ಬೆಂಗಳೂರು ಜೈಲಿನಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಜಯಲಲಿತಾ ಅವರು ನಿಕಟವರ್ತಿ ವಿ ಕೆ ಶಶಿಕಲಾ ಮತ್ತು ಅಪೋಲೊ ಅಸ್ಪತ್ರೆ ಅಧ್ಯಕ್ಷ ಪ್ರತಾಪ್ ಸಿ ರೆಡ್ಡಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಜಯಲಲಿತಾ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ಸೇರಿಸಿದಾಗಿನಿಂದ ಆಕೆಯ ಸಾವಿನ ತನಕ ಆಕೆಗೆ ನೀಡಲಾಗಿರುವ ವೈದ್ಯಕೀಯ ಚಿಕಿತ್ಸೆ ಬಗೆಗಿನ ಮಾಹಿತಿಗಳನ್ನು ಸಲ್ಲಿಸುವಂತೆ ಸಮನ್ಸ್ನಲ್ಲಿ ಆದೇಶಿಸಲಾಗಿದೆ. ಇದಕ್ಕೆ ಹದಿನೈದು ದಿನಗಳ ಕಾಲಾವಕಾಶ ನೀಡಲಾಗಿದೆ.
ಜಯಲಲಿತಾ ಅವರನ್ನು ಕಳೆದ ವರ್ಷ ಸೆ.22ರಂದು ಅಪೋಲೋ ಆಸ್ಪತ್ರೆಗೆ ಸೇರಿಸಲಾಗಿತ್ತು. ಡಿ.5ರಂದು ಆಕೆಯ ಸಾವು ಸಂಭವಿಸಿತ್ತು.
ಜಸ್ಟಿಸ್ ಎ ಅರುಮುಘಸ್ವಾಮಿ ಆಯೋಗವು ಜಯಲಲಿತಾ ಅವರ ಶಂಕಾಸ್ಪದ ಸಾವಿನ ತನಿಖೆಯನ್ನು ನಡೆಸುತ್ತಿದೆ.
ಈಗ ಜೈಲಿನಲ್ಲಿರುವ ಶಶಿಕಲಾ ಅವರು ತಮ್ಮ ಸಾಕ್ಷ್ಯವನ್ನು ವಕೀಲರ ಮೂಲಕ ಇಲ್ಲವೇ ಖುದ್ದು ಹಾಜರಾಗುವ ಮೂಲಕ ಸಲ್ಲಿಸಬಹುದು ಎಂದು ಪಿಟಿಐ ಮೂಲಗಳು ತಿಳಿಸಿವೆ.
ಶಶಿಕಲಾ ಅವರ ಸೋದರ ಸಂಬಂಧಿ ಮತ್ತು ಈಗ ಬದಿಗೆ ಒತ್ತಲ್ಪಟ್ಟಿರುವ ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್ ಅವರು ಜಯಲಲಿತಾ ಅವರು ಆಸ್ಪತ್ರೆಯಲ್ಲಿ ತಮ್ಮ ಕೊನೆಗಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಚಿತ್ರಿಸಲಾಗಿದ್ದ ವಿಡಿಯೋ ತುಣುಕೊಂದನ್ನು ಮಾಧ್ಯಮಕ್ಕೆ ಬಿಡುಗಡೆಗೊಳಿಸಿದ ಎರಡು ದಿನಗಳ ತರುವಾಯ ಆಯೋಗವು, ಶಶಿಕಲಾ ಮತ್ತು ಅಪೋಲೋ ಆಸ್ಪತ್ರೆ ಅಧ್ಯಕ್ಷರಿಗೆ ಸಮನ್ಸ್ ಜಾರಿ ಮಾಡಿರುವುದು ಗಮನಾರ್ಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…