ಮಾಜಿ ಸಿಎಂ ದಿ| ಜಯಲಲಿತಾ ದತ್ತು ಪುತ್ರ ಸುಧಾಕರನ್ ಬಿಡುಗಡೆ
Team Udayavani, Oct 17, 2021, 5:37 AM IST
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ| ಜಯಲಲಿತಾ ಅವರ ದತ್ತುಪುತ್ರ ಸುಧಾಕರನ್ ಅವರು ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಅವರು 4 ವರ್ಷ 8 ತಿಂಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಸುಧಾಕರನ್ ಬಿಡುಗಡೆ ಆಗುತ್ತಿದ್ದಂತೆ ಚೆನ್ನೈನಿಂದ ಆಗಮಿಸಿದ ಅವರ ಬೆಂಬಲಿಗರು ಜೈಲಿನ ಮುಂಭಾಗದಲ್ಲಿ ಜೈಕಾರ ಹಾಕಿ ಸ್ವಾಗತಿಸಿದರು.
ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪೆ¤ ಶಶಿಕಲಾ ನಟರಾಜನ್ ಜತೆಯೇ ಸುಧಾಕರನ್ ಬಿಡುಗಡೆ ಆಗಬೇಕಿತ್ತು. ಆದರೆ ದಂಡ ಕಟ್ಟುವುದಕ್ಕೆ ಆಗದ ಹಿನ್ನೆಲೆ ಒಂದು ವರ್ಷ ಹೆಚ್ಚು ಕಾಲ ಜೈಲು ವಾಸ ಅನುಭವಿಸಬೇಕಾಯಿತು. ಅಕ್ರಮ ಆಸ್ತಿ ಸಂಪಾದಿಸಿದ್ದ ಪ್ರಕರಣದಲ್ಲಿ 2017ರಲ್ಲಿ ಇವರನ್ನು ಬಂಧಿಸಲಾಗಿತ್ತು.
ಇದನ್ನೂ ಓದಿ: ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್