ಯಾತ್ರೆಗೆ ಅಂಟಿದ ದೈವ ವಿವಾದ; ವಿವಾದಿತ ಪಾಸ್ಟರ್‌ ಜತೆಗಿನ ರಾಹುಲ್‌ ಚರ್ಚೆಯ ವೀಡಿಯೋ ವೈರಲ್‌


Team Udayavani, Sep 11, 2022, 6:30 AM IST

ಯಾತ್ರೆಗೆ ಅಂಟಿದ ದೈವ ವಿವಾದ; ವಿವಾದಿತ ಪಾಸ್ಟರ್‌ ಜತೆಗಿನ ರಾಹುಲ್‌ ಚರ್ಚೆಯ ವೀಡಿಯೋ ವೈರಲ್‌

ಕನ್ಯಾಕುಮಾರಿಯಲ್ಲಿ ರಾಹುಲ್‌ ಗಾಂಧಿ ಅವರು ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು.

ಕನ್ಯಾಕುಮಾರಿ/ಜೈಪುರ: ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆ ಆರಂಭವಾಗಿ 4 ದಿನಗಳು ಕಳೆಯುತ್ತಲೇ ಅದಕ್ಕೆ ವಿವಾದ ಅಂಟಿಕೊಂಡಿದೆ. ಕನ್ಯಾಕುಮಾರಿಯಲ್ಲಿನ ವಿವಾದಿತ ಪಾಸ್ಟರ್‌ ಜಾರ್ಜ್‌ ಪೊನ್ನಯ್ಯ ರಾಹುಲ್‌ ಜತೆ ಮಾತುಕತೆ ನಡೆಸಿದ ವೀಡಿಯೋದಲ್ಲಿ “ಜೀಸಸ್‌ ಮಾತ್ರ ದೇವರು. ಶಕ್ತಿ ಮತ್ತು ಇತರರು ಅಲ್ಲ’ ಎಂದಿರು ವುದು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಯ ಶೆಹಜಾದ್‌ ಪೂನಾವಾಲಾ, ಸಂಭಿತ್‌ ಪಾತ್ರಾ ಮತ್ತಿತರರು ವೀಡಿಯೋ ಹಂಚಿಕೊಂಡಿದ್ದಾರೆ.

ತ.ನಾಡಿನ ಪುಲಿಯೂರ್‌ ಕುರಿಚ್ಚಿಯಲ್ಲಿ ರಾಹುಲ್‌, ಜಾರ್ಜ್‌ ಪೊನ್ನ ಯ್ಯರನ್ನು ಭೇಟಿಯಾ ಗಿದ್ದಾರೆ. ಆ ವೇಳೆ ರಾಹುಲ್‌ “ಜೀಸಸ್‌ ಅವರೇ ದೇವರಾಗಿದ್ದಾರೆಯೇ? ಇದು ಸರಿಯೇ’ ಎಂದಿದ್ದಾರೆ. ಅದಕ್ಕೆ ಉತ್ತರಿ ಸಿದ ಪಾಸ್ಟರ್‌, “ಅವರೇ ನೈಜ ದೇವರು. ಅವರು ಮಾನವನ ರೀತಿ ಇರುತ್ತಾರೆ. ಶಕ್ತಿ ಮತ್ತು ಇತರರಂತೆ ಅಲ್ಲ’ ಎಂದು ಹೇಳಿರುವುದು ದಾಖಲಾಗಿದೆ.

ನಿಜ ಬಣ್ಣ ಬಯಲು: ಈ ವೀಡಿಯೋಕ್ಕೆ ಪ್ರತಿ ಕ್ರಿಯೆ ನೀಡಿದ ಬಿಜೆಪಿಯ ಸಂಭಿತ್‌ ಪಾತ್ರಾ, “ಭಾರತ್‌ ಜೋಡೋದ ನಿಜ ಬಣ್ಣ ಬಯಲಾ ಗಿದೆ. ಶಕ್ತಿ ದೇವತೆಯನ್ನು ಅವಮಾನಿಸ  ಲಾಗಿದೆ. ಕಾಂಗ್ರೆಸ್‌ ಇಂಥ ಪ್ರಯತ್ನಗಳನ್ನು ನಡೆಸಿರುವುದು ಮೊದಲಲ್ಲ’ ಎಂದರು. ಯಾತ್ರೆಯಲ್ಲಿ ತುಷ್ಟೀ ಕರಣದ ಪ್ರಯತ್ನ ನಡೆಸಲಾಗಿದೆಯೇ ಎಂದು ಸಂಭಿತ್‌ ಪ್ರಶ್ನಿಸಿದ್ದಾರೆ. ಹಿಂದೂ ವಿರೋಧಿ ಅಭಿಪ್ರಾಯ ವ್ಯಕ್ತಪಡಿಸಿ ದ್ದಕ್ಕೆ ಜಾರ್ಜ್‌ ಪೊನ್ನಯ್ಯ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು ಎಂದು ಶೆಹಜಾದ್‌ ಪೂನಾವಾಲಾ ತಿಳಿಸಿದ್ದಾರೆ.

ಕಾಂಗ್ರೆಸ್‌ ತಿರುಗೇಟು: ಬಿಜೆಪಿಯ ದ್ವೇಷದ ಕಾರ್ಖಾನೆ ರಾಹುಲ್‌ ವಿರುದ್ಧ ಟ್ವೀಟ್‌ಗಳನ್ನು ಮಾಡಲಾರಂಭಿಸಿದೆ. ಅದಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್‌ ಸಂಸದ ಜೈರಾಮ್‌ ರಮೇಶ್‌ ಹೇಳಿದ್ದಾರೆ. ಇದೇ ವೇಳೆ ಭಾರತ ಜೋಡೋ ಯಾತ್ರೆ ತಮಿಳುನಾಡಿನಿಂದ ಕೇರಳವನ್ನು ಪ್ರವೇಶಿಸಿದೆ. ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿ ಸದಸ್ಯರು, ರವಿವಾರ ಯಾತ್ರೆಯನ್ನು ವಿದ್ಯುಕ್ತವಾಗಿ ಸ್ವಾಗತಿಸಲಿದ್ದಾರೆ.

ಯಾರು ಈ ಪಾಸ್ಟರ್‌?
ಕನ್ಯಾಕುಮಾರಿಯಲ್ಲಿ ಇರುವ ಜನನಯಾಗ ಕ್ರಿಸ್ತವ ಪೆರವೈ ಎಂಬ ಎನ್‌ಜಿಒದ ಮುಖ್ಯಸ್ಥರಾಗಿದ್ದಾರೆ ಜಾರ್ಜ್‌ ಪೊನ್ನಯ್ಯ. ಕಳೆದ ವರ್ಷದ ಜುಲೈಯಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದರು. ದ್ವೇಷಮಯ ಮಾತುಗಳನ್ನಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ 30ಕ್ಕೂ ಹೆಚ್ಚು ಕೇಸುಗಳು ಅವರ ವಿರುದ್ಧ ದಾಖಲಾಗಿವೆ.

ರಾಹುಲ್‌ ಬಾಬಾ ಅವರು ಭಾರತವನ್ನು ಜೋಡಿ ಸಲು ಯಾತ್ರೆ ಹಮ್ಮಿಕೊಂಡಿದ್ದೇನೆ ಎನ್ನುತ್ತಾರೆ. ಆದರೆ ದುಬಾರಿ ಬೆಲೆಯ ವಿದೇಶಿ ಟಿ-ಶರ್ಟ್‌ ಧರಿಸಿ ದೇಶ ಜೋಡಣೆಗೆ ಪಾದಯಾತ್ರೆ ಹೊರಟಿದ್ದಾರೆ. ರಾಹುಲ್‌ ದೇಶದ ಇತಿಹಾಸ ಓದಿ ತಿಳಿಯಲಿ.
-ಅಮಿತ್‌ ಶಾ, ಕೇಂದ್ರ ಗೃಹ ಸಚಿವ

 

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.