ಝಾರ್ಖಂಡ್: ಅಲ್ಕಾಯಿದಾ ಉಗ್ರ ಕಲೀಮುದ್ದೀನ್ ಬಂಧನ
Team Udayavani, Sep 23, 2019, 5:25 AM IST
ರಾಂಚಿ: ಅಲ್ಕಾಯಿದಾದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮೊಹಮ್ಮದ್ ಕಲೀಮುದ್ದೀನ್ ಮುಜಾಹಿರಿಯನ್ನು ದಿಲ್ಲಿ ಜಾರ್ಖಂಡ್ ಪೊಲೀಸ್ನ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್) ಇಲ್ಲಿನ ತತಾನಗರ್ ರೈಲ್ವೇ ನಿಲ್ದಾಣದಲ್ಲಿ ಬಂಧಿಸಿದೆ. ಭಾರತದಲ್ಲಿ ಯುವಕರನ್ನು ಜಿಹಾದ್ ನಡೆಸುವಂತೆ ಪ್ರೇರೇಪಿಸುವ ಮತ್ತು ಅದಕ್ಕಾಗಿ ಅವರನ್ನು ತಯಾರು ಮಾಡುವ ಕೆಲಸವನ್ನು ಈತ ಮಾಡುತ್ತಿದ್ದ.
ಅಲ್ಲದೆ ಹೊಸದಾಗಿ ಯುವಕರನ್ನು ನೇಮಕ ಮಾಡಿ, ಬಳಿಕ ಅವರನ್ನು ಪಾಕಿಸ್ಥಾನಕ್ಕೆ ತರಬೇತಿಗಾಗಿ ಕಳುಹಿಸುತ್ತಿದ್ದ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಎಲ್.ಮೀನಾ ತಿಳಿಸಿದ್ದಾರೆ. ಜೆಮ್ಶೆಡ್ಪುರದ ನಿವಾಸಿಯಾದ ಕಲೀಮುದ್ದೀನ್ ಕಳೆದ 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ.
ಈತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಉಗ್ರ ನೇಮಕಕ್ಕಾಗಿ ಇವನು ಗುಜರಾತ್, ಉತ್ತರಪ್ರದೇಶ, ಪಶ್ಚಿಮ ಬಂಗಾಲ ಮತ್ತಿತರ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದ. ಅಲ್ಲದೆ, ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಸೌದಿ ಅರೇಬಿಯಾ ಮತ್ತು ಇತರೆ ದೇಶಗಳಿಗೂ ಈತ ಹೋಗಿ ಬಂದಿದ್ದಾನೆ ಎಂದು ಎಟಿಎಸ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು