ಜಾರ್ಖಂಡ್ ಚುನಾವಣೆ: ಸಮೀಕ್ಷೆಯಲ್ಲಿ ಬಿಜೆಪಿಗೆ ಹಿನ್ನಡೆ
ಮತ್ತೂಂದು ರಾಜ್ಯ ಕೈತಪ್ಪುವ ಭೀತಿಯಲ್ಲಿ ಕಮಲಪಡೆ
Team Udayavani, Dec 20, 2019, 9:24 PM IST
ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆ ಶುಕ್ರವಾರ ಮುಕ್ತಾಯವಾಗಿದ್ದು, ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ.
ಇಂಡಿಯಾ ಟುಡೆ-ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯಲ್ಲಿ ಜೆಎಂಎಂ, ಕಾಂಗ್ರೆಸ್ ಮೈತ್ರಿಕೂಟಕ್ಕೆ 38-50, ಬಿಜೆಪಿ 22-32 ಸ್ಥಾನ ಪಡೆಯಲಿದೆ ಎಂದು ಹೇಳಲಾಗಿದೆ.
ಸಿ-ವೋಟರ್ ಸಮೀಕ್ಷೆಯಲ್ಲಿ ಮೈತ್ರಿಕೂಟ-35, ಬಿಜೆಪಿ-32 ಸ್ಥಾನ ಪಡೆಯುವ ಮೂಲಕ ಅತಂತ್ರ ಫಲಿತಾಂಶ ಬರಲಿದೆ ಎಂದು ತಿಳಿದು ಬಂದಿದೆ.
ಕಾಶಿಶ್ ನ್ಯೂಸ್ ಸಮೀಕ್ಷೆಯಲ್ಲಿ ಬಿಜೆಪಿ-25-30, ಮೈತ್ರಿಕೂಟ-37-49 ಸ್ಥಾನ ಗಳಿಲಿದೆ ಎಂದು ಪ್ರಕಟಿಸಿದೆ. 81 ಸದಸ್ಯ ಬಲದ ಈ ರಾಜ್ಯದಲ್ಲಿ ಸರಳ ಬಹುಮತಕ್ಕೆ 41 ಸ್ಥಾನ ಪಡೆಯಬೇಕಿದೆ.
2019ರ ಲೋಕಸಭೆ ಚುನಾವಣೆ ಬಳಿಕ ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ಜಾರ್ಖಂಡ್ 3ನೇ ರಾಜ್ಯವಾಗಿದ್ದು, ಪ್ರಸ್ತುತ ಅಧಿಕಾರದಲ್ಲಿರುವ ಬಿಜೆಪಿ ಈ ರಾಜ್ಯವನ್ನು ಕಳೆದುಕೊಳ್ಳುವ ಭೀತಿಯಲ್ಲಿದೆ. ಇದಕ್ಕೂ ಮುನ್ನ ಚುನಾವಣೆ ಎದುರಿಸಿದ ಎರಡು ರಾಜ್ಯಗಳ ಪೈಕಿ ಮಹಾರಾಷ್ಟ್ರದಲ್ಲೂ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಹರ್ಯಾಣದಲ್ಲೂ ಹಿನ್ನಡೆಯಾಗಿದ್ದು, ಮೈತ್ರಿ ಸರ್ಕಾರ ರಚಿಸುವ ಮೂಲಕ ಅಧಿಕಾರ ಉಳಿಸಿಕೊಂಡಿದೆ.
ಶೇ.70.83 ಮತದಾನ:
ಜಾರ್ಖಂಡ್ನಲ್ಲಿ ಶುಕ್ರವಾರ 5ನೇ ಹಾಗೂ ಕೊನೇ ಹಂತದ ಮತದಾನ ಶಾಂತಿಯುತವಾಗಿ ನಡೆದಿದ್ದು, ಒಟ್ಟಾರೆ ಶೇ.70.83ರಷ್ಟು ಮತ ಚಲಾವಣೆಯಾಗಿವೆ. ಡಿ.23ರಂದು ಫಲಿತಾಂಶ ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್