ನಾಪತ್ತೆಯಾಗಿದ್ದ ಹತ್ತನೇ ತರಗತಿ ಹುಡುಗಿ ಸಿಕ್ಕಿದ್ದು ಶವವಾಗಿ; ಅತ್ಯಾಚಾರ-ಕೊಲೆ ಶಂಕೆ
Team Udayavani, Jun 10, 2021, 9:10 AM IST
ರಾಂಚಿ: ಸ್ಥಳೀಯ ಬಿಜೆಪಿ ನಾಯಕರೊಬ್ಬರ 16 ವರ್ಷದ ಪುತ್ರಿಯ ಮೃತ ದೇಹವು ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜಾರ್ಖಂಡ್ ನ ಪಲಾಮು ಜಿಲ್ಲೆಯ ಲಾಲಿಮಟಿ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆಂದು ಶಂಕೆ ವ್ಯಕ್ತ ಪಡಿಸಲಾಗಿದೆ.
ಬುಧಾಬರ್ ಗ್ರಾಮದ ನಿವಾಸಿಯಾದ ಬಾಲಕಿಯ ತಂದೆ ಸ್ಥಳೀಯ ಬಿಜೆಪಿ ಮುಖಂಡನಾಗದ್ದ. ಬಾಲಕಿಯು ಹತ್ತನೇ ತರಗತಿಯಲ್ಲಿ ಕಲಿಯುತ್ತಿದ್ದಳು.
ಪ್ರಾಥಮಿಕ ತನಿಖೆಯ ವೇಳೆ ಸ್ಥಳದಲ್ಲಿ ಮೊಬೈಲ್ ಫೋನ್ ಒಂದು ಪತ್ತೆಯಾಗಿದೆ. ಇದರ ಆಧಾರದಲ್ಲಿ ಓರ್ವ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ. 23 ವರ್ಷದ ಪ್ರದೀಪ್ ಕುಮಾರ್ ಸಿಂಗ್ ಧನುಕ್ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಪರಪ್ಪನ ಅಗ್ರಹಾರ ಸೇರಿದ ರಾಜೇಶ್ವರಿ ಶೆಟ್ಟಿ: ಜೈಲಿನಲ್ಲಿ 14 ದಿನ ಕ್ವಾರಂಟೈನ್
ಜೂನ್ 7ರಿಂದ ಹುಡುಗಿ ನಾಪತ್ತೆಯಾಗಿದ್ದಳು. ಮಂಗಳವಾರ ಹುಡುಗಿರ ಮನೆಯವರು ಪಾಂಕಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಪೊಲೀಸರ ಹುಡುಗಿಗಾಗಿ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಹುಡುಗಿಯ ದೇಹವನ್ನು ಸ್ಥಳೀಯರು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಹುಡುಗಿಯ ಮೇಲೆ ಹಲ್ಲೆ ನಡೆಸಿ ನಂತರ ಬಟ್ಟೆಯಿಂದ ದೇಹವನ್ನು ಮರಕ್ಕೆ ನೇತಾಡಿಸಲಾಗಿದೆ. ಆರೋಪಿಗಳು ಕೊಲೆಗೈದು ನಂತರ ಆತ್ಮಹತ್ಯೆ ಎಂದು ಬಿಂಬಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ