ಬೀಫ್, ಮದ್ಯ ಸೇವಿಸಲು ನಿರಾಕರಿಸಿದವನನ್ನು ವಿವಸ್ತ್ರಗೊಳಿಸಿ ಥಳಿತ
Team Udayavani, Jan 3, 2023, 1:03 PM IST
ರಾಂಚಿ: ಮದ್ಯ ಹಾಗೂ ದನದ ಮಾಂಸವನ್ನು ಸೇವಿಸಿಲು ನಿರಾಕರಿಸಿದ ಕಾರಣ ಐದು ಜನರ ಗುಂಪೊಂದು ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಾರ್ಖಂಡ್ನ ಸಾಹಿಬ್ಗಂಜ್ನ ರಾಧಾನಗರ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಚಂದನ್ ರವಿದಾಸ್ ಥಳಿತಕ್ಕೆ ಒಳಗಾದ ವ್ಯಕ್ತಿ. ಚಂದನ್ ಶನಿವಾರ ರಾತ್ರಿ ಅಂಗಡಿ ಹೋಗಿದ್ದರು. ಅಲ್ಲೇ ಪಕ್ಕದಲ್ಲಿ ನಾಲ್ಕೈದು ಮಂದಿ ಕುಡಿಯುತ್ತಾ, ದನದ ಮಾಂಸವನ್ನು ಸೇವಿಸುತ್ತಿದ್ದರು. ಇದನ್ನು ನೋಡಿದ ಚಂದನ್ ಸಿಟ್ಟಿನಿಂದ ಗುಂಪಿನತ್ತ ನೋಡಿದ್ದಾರೆ. ಇದೇ ಕಾರಣಕ್ಕೆ ಆ ಗುಂಪು ಚಂದನ್ ಬಳಿ ಬಂದು ಆತನಿಗೆ ಬಲವಂತವಾಗಿ ಮದ್ಯ ಕುಡಿಸಲು ಯತ್ನಿಸಿದ್ದಾರೆ. ಇದಾದ ಬಳಿಕ ಬಲವಂತವಾಗಿ ದನದ ಮಾಂಸವನ್ನು ತಿನ್ನಿಸಲು ಬಂದಿದ್ದಾರೆ ಎಂದು ದೂರಿನಲ್ಲಿ ಚಂದನ್ ಆರೋಪಿಸಿದ್ದಾರೆ.
ಚಂದನ್ ಅವರ ಬಟ್ಟೆಯನ್ನು ತೆಗೆದು ವಿವಸ್ತ್ರಗೊಳಿಸಿದ್ದಾರೆ. ಆತನ ಮೇಲೆ ಕಲ್ಲು ಎಸೆದು, ಆತನಿಂದ ಮೊಬೈಲ್ ಹಾಗೂ 8000 ಸಾವಿರ ನಗದನ್ನು ಕಸಿದುಕೊಂಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.
ಮಿಥುನ್ ಶೇಕ್ ಹಾಗೂ ಇತರ ನಾಲ್ವರ ವಿರುದ್ದ ಚಂದನ್ ದೂರು ನೀಡಿದ್ದು, ದೂರು ದಾಖಲಿಸಿಕೊಂಡು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ