Jharkhand: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಡಿಸಿ-ಎಸ್ಪಿ ಕಚೇರಿಯ ಇಬ್ಬರು ಚಾಲಕರು ಅರೆಸ್ಟ್
Team Udayavani, Dec 29, 2023, 10:50 AM IST
ರಾಂಚಿ: ಮಹಿಳೆಯೊಬ್ಬರ ಮೇಲೆ ಇಬ್ಬರು ಹಿರಿಯ ಅಧಿಕಾರಿಗಳ ಕಾರು ಚಾಲಕರು ಅತ್ಯಾಚಾರವೆಸಗಿದ ಘಟನೆ ಜಾರ್ಖಂಡ್ನ ಪಲಾಮು ಜಿಲ್ಲೆಯಲ್ಲಿ ಗುರುವಾರ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಅಧಿಕಾರಿಗಳ ಇಬ್ಬರನ್ನು ಕಾರು ಚಾಲಕರನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿಗಳನ್ನು ಪಲಾಮು ಡೆಪ್ಯೂಟಿ ಕಮಿಷನರ್ ಅವರ ಬೆಂಗಾವಲು ವಾಹನದಲ್ಲಿದ್ದ ಚಾಲಕ ಧರ್ಮೇಂದ್ರ ಕುಮಾರ್ (30) ಮತ್ತು ಪಲಾಮು ಪೊಲೀಸ್ ಅಧೀಕ್ಷಕರ ನಿವಾಸದ ಚಾಲಕ ಪ್ರಕಾಶ್ ಕುಮಾರ್ (40) ಎಂದು ಗುರುತಿಸಲಾಗಿದೆ.
ಗುರುವಾರ (ಡಿಸೆಂಬರ್ 28) ಬೆಳಿಗ್ಗೆ ಮಹಿಳೆ ದಾಲ್ತೋಂಗಂಜ್ ರೈಲ್ವೆ ನಿಲ್ದಾಣದಿಂದ ಹೊರಟು ಮೊಬೈಲ್ ರೀಚಾರ್ಜ್ ಅಂಗಡಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮಹಿಳೆಯ ಮೊಬೈಲ್ ಫೋನ್ ರೀಚಾರ್ಜ್ ಮಾಡುವ ನೆಪದಲ್ಲಿ ಚಾಲಕರಿಬ್ಬರು ಮಹಿಳೆಯೊಂದಿಗೆ ಮಾತಿನ ಚಕಮಕಿ ನಡೆಸಿ ಆಕೆಯನ್ನು ಬಲವಂತವಾಗಿ ನಿವಾಸಿಗಳ ವಸತಿಗೃಹಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಇಬ್ಬರೂ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಮತ್ತು ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆಕೆಯ ದೂರಿನಲ್ಲಿ ತಿಳಿಸಲಾಗಿದೆ.
ಘಟನೆಗೆ ಸಂಬಂಧಿಸಿ ಮಹಿಳೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎರಡು ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ.
ಪಲಾಮು ಎಸ್ಪಿ ರಿಷ್ಮಾ ರಮೇಶನ್ ಘಟನೆಯನ್ನು ದೃಢಪಡಿಸಿದ್ದಾರೆ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಆರೋಪಿ ಮತ್ತು ಮಹಿಳೆಯನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದ್ದು ವೈದ್ಯಕೀಯ ಪರೀಕ್ಷೆ ವರದಿ ಆದರಿಸಿ ಹೆಚ್ಚಿನ ತನಿಖೆ ನಡೆಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: Gaza mother: ಯುದ್ಧ ಪೀಡಿತ ಪ್ರದೇಶದಿಂದ 5km ನಡೆದು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ