7 ಕಿ.ಮೀ ಹೊತ್ತು ತಂದರು ವೈದ್ಯರಿಲ್ಲದೆ ಆಸ್ಪತ್ರೆ ಎದುರೇ ತಾಯಿ-ಮಗು ಸಾವು
ಮೂಲಸೌಲಭ್ಯಗಳಿಂದ ವಂಚಿತವಾದ ಬರ್ದೌನಿ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇರಲಿಲ್ಲ.
Team Udayavani, Mar 1, 2021, 6:34 PM IST
ಖಾರ್ಜಂಡ್ : ವೈದ್ಯರಿಲ್ಲದ ಕಾರಣ ಬಾಣಂತಿ ತಾಯಿ ಹಾಗೂ ನವಜಾತ ಶಿಶುವೊಂದು ಸರ್ಕಾರಿ ಆಸ್ಪತ್ರೆಯ ಎದುರೇ ಸಾವನ್ನಪ್ಪಿದ ಘಟನೆ ಗಿರಿಡಿಹ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬರ್ದೌನಿ ಗ್ರಾಮದ ಲಕ್ಷ್ಮಿಬಥನ್ ಕಾಲೋನಿ ನಿವಾಸಿ ಸುರ್ಜಾ ಮರಂಡಿ ಹಾಗೂ ಆಕೆಯ ಮೂರು ದಿನದ ಹಸುಗೂಸು ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿದ್ದಾರೆ.
ಗುರುವಾರ ಈಕೆಗೆ ಹೆರಿಗೆಯಾಗಿತ್ತು. ಮಗುವಿನ ಹೊಕ್ಕಳ ಬಳ್ಳಿ ಕತ್ತರಿಸದ ಕಾರಣ ನಿರಂತರ ರಕ್ತಸ್ರಾವ ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬದವರು ಮುಂದಾದರು. ಆದರೆ, ಮೂಲಸೌಲಭ್ಯಗಳಿಂದ ವಂಚಿತವಾದ ಬರ್ದೌನಿ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇರಲಿಲ್ಲ. ಈ ಹಿನ್ನೆಲೆ ಮನೆಯವರು ಮಂಚದ(ಪಲ್ಲಂಗ) ಸಹಾಯದಿಂದ ತಾಯಿ,ಮಗುವನ್ನು 7 ಕಿ.ಮೀ ಹೊತ್ತು ಗುಹಾನ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದರು. ಆದರೆ, ಈ ವೇಳೆ ವೈದ್ಯರಿಲ್ಲದ ಕಾರಣ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೆ ಕೊನೆಯುಸಿರೆಳೆದಿದ್ದಾರೆ.
ಇನ್ನು ಗುಹಾನ್ ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳೆದ ವರ್ಷ 6 ವೈದ್ಯರನ್ನು ನೇಮಕ ಮಾಡಿತ್ತು. ಆದರೆ, ಅದರಲ್ಲಿ ನಾಲ್ಕು ಜನರು ಇದುವರೆಗು ಕರ್ತವ್ಯಕ್ಕೆ ಹಾಜರಾಗಿಲ್ಲ. ಇನ್ನುಳಿದ ಇಬ್ಬರ ಪೈಕಿ ಒಬ್ಬರು ರಜೆಯಲ್ಲಿದ್ದರು. ಬಾಣಂತಿ ಹಾಗೂ ಮಗು ಆಸ್ಪತ್ರೆಗೆ ಕರೆತಂದ ವೇಳೆ ಕೇವಲ ಒಬ್ಬರೇ ವೈದ್ಯರಿದ್ದು, ಅವರೂ ಕೂಡ ಊಟ ಮಾಡಲು ತೆರಳಿದ್ದರು ಎಂದು ಮೇಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!