ಜಿಎಸ್ಟಿಗೆ ರಾಜ್ಯಸಭೆ ಅಸ್ತು; ಜುಲೈನಿಂದ ಜಾರಿ
Team Udayavani, Apr 7, 2017, 3:45 AM IST
ನವದೆಹಲಿ: ಐತಿಹಾಸಿಕ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವಿಧೇಯಕಕ್ಕೆ ಗುರುವಾರ ರಾಜ್ಯಸಭೆಯಲ್ಲೂ ಅಂಗೀಕಾರ ದೊರೆತಿದ್ದು, ಜುಲೈನಿಂದಲೇ ದೇಶಾದ್ಯಂತ ಏಕರೂಪದ ತೆರಿಗೆ ವ್ಯವಸ್ಥೆಯನ್ನು ಜಾರಿಮಾಡಲು ಇದ್ದ ಎಲ್ಲ ಅಡೆತಡೆಗಳೂ ನಿವಾರಣೆಯಾಗಿವೆ.
ಮೇಲ್ಮನೆಯಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್-ಬಿಜೆಪಿ ನಡುವೆ ಒಪ್ಪಂದವೇರ್ಪಟ್ಟ ಹಿನ್ನೆಲೆಯಲ್ಲಿ ಮಸೂದೆಗೆ ಅನುಮೋದನೆ ಸಿಕ್ಕಿದೆ.
ಆರಂಭದಲ್ಲಿ ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ವಿಧೇಯಕಕ್ಕೆ ಕೆಲವೊಂದು ತಿದ್ದುಪಡಿಗಳನ್ನು ಪ್ರಸ್ತಾಪಿಸಿದರಾದರೂ, ಕೊನೆಗೆ ಜಿಎಸ್ಟಿ ಸರ್ವಾನುಮತದಿಂದ ಅಂಗೀ ಕಾರವಾಗಬೇಕು ಎಂಬ ಮಾಜಿ ಪ್ರಧಾನಿ ಮನಮೋಹನ್ಸಿಂಗ್ ಅವರ ಸೂಚನೆಯ ಮೇರೆಗೆ ತಮ್ಮ ಪ್ರಸ್ತಾಪವನ್ನು ಕೈಬಿಟ್ಟರು. ಹೀಗಾಗಿ, ರಾಜ್ಯಸಭೆಯಲ್ಲಿ ಯಾವುದೇ ಅಡ್ಡಿಗಳಿಲ್ಲದೆ ವಿಧೇಯಕ ಅಂಗೀಕಾರಗೊಂಡಿತು.
ಇನ್ನು ರಾಜ್ಯ ಸರ್ಕಾರಗಳು ಜಿಎಸ್ಟಿಯನ್ನು ಪಾಸ್ ಮಾಡಿದರೆ, ಜುಲೈನಿಂದಲೇ ಏಕರೂಪದ ತೆರಿಗೆ ಜಾರಿಯಾಗಲಿದೆ.8 ಗಂಟೆಗಳ ಕಾಲ ನಡೆದ ಚರ್ಚೆ ವೇಳೆ, ವಿತ್ತ ಸಚಿವ ಜೇಟಿÉ ಅವರು, ಜಿಎಸ್ಟಿ ಕ್ರೆಡಿಟ್ ಅನ್ನು ಹಿಂದಿನ ಯುಪಿಎ ಸರ್ಕಾರಕ್ಕೆ ನೀಡಬಯಸುತ್ತೇನೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
MUST WATCH
ಹೊಸ ಸೇರ್ಪಡೆ
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ