ಜಿಗ್ನೇಶ್ ಮೇವಾನಿ ರ್ಯಾಲಿ ರದ್ದು: ದಿಲ್ಲಿಯಲ್ಲಿ ಭಾರೀ ಪ್ರತಿಭಟನೆ
Team Udayavani, Jan 9, 2018, 12:02 PM IST
ಹೊಸದಿಲ್ಲಿ : ಗುಜರಾತ್ ನೂತನ ಶಾಸಕ ಹಾಗೂ ದಲಿತ ನಾಯಕ ಜಿಗ್ನೇಶ್ ಮೇವಾನಿ ಪಾಲ್ಗೊಳ್ಳಲಿದ್ದ ಇಂದು ಮಂಗಳವಾರದ ರ್ಯಾಲಿಗೆ ಪೊಲೀಸರು ಅನುಮತಿ ನಿರಾಕರಿಸಿರುವ ಕಾರಣ ರಾಲಿಯನ್ನು ರದ್ದುಪಡಿಸಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಿಡುವ ಸಲುವಾಗಿ ದಿಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಮೇವಾನಿ ಅವರ “ಯುವ ಹೂಂಕಾರ್ ರ್ಯಾಲಿ’ಯನ್ನು ರದ್ದುಪಡಿಸಲಾದುದಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ಪ್ರತಿಭಟನೆ ವ್ಯಕ್ತವಾಯಿತು.
ಎಎನ್ಐ ವರದಿಯ ಪ್ರಕಾರ ಗುಜರಾತ್ ದಲಿತ ನಾಯಕನ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿ ಪಾರ್ಲಿಮೆಂಟ್ ಸ್ಟ್ರೀಟ್ನಲ್ಲಿ ಪ್ರಬಲ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.
ಇದೇ ವೇಳೆ ಮೇವಾನಿಯನ್ನು ಟೀಕಿಸಿ ಹಲವಾರು ಪೋಸ್ಟರ್ಗಳು ರಾಷ್ಟ್ರ ರಾಜಧಾನಿಯಲ್ಲಿ ಕಂಡು ಬಂದಿವೆ. ಈ ಪೋಸ್ಟರ್ಗಳಲ್ಲಿ ಮೇವಾನಿಯನ್ನು “ಭಗೋಡಾ’ (ತಲೆಮರೆಸಿಕೊಂಡವನು) ಎಂದು ಆರೋಪಿಸಲಾಗಿದೆಯಲ್ಲದೆ ಜಾತಿ ನೆಲೆಯಲ್ಲಿ ಸಮಾಜವನ್ನು ಒಡೆಯುವ ಪ್ರಚೋದನಕಾರಿ ಭಾಷಣ ಮಾಡುವವನೆಂದೂ ಖಂಡಿಸಲಾಗಿದೆ. ಮೇಲಾಗಿ ಮೇವಾನಿಗೆ ನಕ್ಸಲರ ನಂಟು ಕೂಡ ಇದೆ ಎಂದು ಆರೋಪಿಸಲಾಗಿದೆ.
ದಿಲ್ಲಿ ಪೋಲಿಸರು ಸೆ.144ರಡಿ ಮೇವಾನಿ ರ್ಯಾಲಿಗೆ ಅನುಮತಿ ನಿರಾಕರಿಸಿದ್ದರು. ದಿಲ್ಲಿಯು ಗಣರಾಜ್ಯೋತ್ಸವ ದಿನಕ್ಕೆ ಸಜ್ಜಾಗುತ್ತಿರುವ ಕಾರಣವನ್ನೂ ಪೊಲೀಸರು ಮುಂದಿಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ