ಇಂದೋರ್ : 7 ಮಂದಿ ಸಾವನಪ್ಪಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಘಟನೆಯ ಹಿಂದಿದೆ ಲವ್ ಸ್ಟೋರಿ
Team Udayavani, May 8, 2022, 4:48 PM IST
ಭೋಪಾಲ್ : ಇಂದೋರ್ ಜಿಲ್ಲೆಯ ಸ್ವರ್ಣ್ ಬಾಗ್ ಕಾಲೋನಿಯಲ್ಲಿರುವ ಎರಡು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ 7 ಮಂದಿ ಸಾವನ್ನಪ್ಪಿರುವ ಘಟನೆಗೆ ಹೊಸ ತಿರುವು ಸಿಕ್ಕಿತ್ತು ಈ ಘಟನೆ ಯಾವುದೇ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿಲ್ಲ ಬದಲಾಗಿ ಇದೊಂದು ಕೊಲೆ ಕೃತ್ಯ ಎಂಬುದು ಸಾಬೀತಾಗಿದೆ.
ಅಂದಹಾಗೆ ಶನಿವಾರ ಮುಂಜಾನೆ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಹೊಗೆ ಕಾಣಿಸಿಕೊಂಡಿದನ್ನು ಜನ ನೋಡಿದ್ದಾರೆ ಅಷ್ಟೋತ್ತಿಗಾಗಲೇ ಬೆಂಕಿ ಇಡೀ ಕಟ್ಟಡಕ್ಕೆ ಆವರಿಸಿಕೊಂಡಿದೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬಂದಿಗಳು ಬಂದು ಬೆಂಕಿ ನಂದಿಸುವಷ್ಟರಲ್ಲಿ ಏಳು ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದರು ಮತ್ತೆ ಒಂಬತ್ತು ಮಂದಿ ಗಂಭೀರ ಗಾಯಗೊಂಡು ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಷ್ಟೆಲ್ಲಾ ಘಟನೆಗೆ ಕಟ್ಟಡದಲ್ಲಿ ಆದ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಅಲ್ಲಿದ್ದ ಜನರು ನಂಬಿದ್ದರು ಆದರೆ ಘಟನೆ ಕುರಿತು ಕೇಸು ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರು ಕಟ್ಟಡದ ಬಳಿ ಇರುವ ಸಿಸಿಟಿವಿ ಚಿತ್ರಣವನ್ನು ನೋಡಿದ್ದಾರೆ ಈ ವೇಳೆ ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವಲ್ಲ ಬದಲಾಗಿ ಇದರಹಿಂದೆ ಒಬ್ಬ ಯುವಕನ ಕೃತ್ಯ ಬೆಳಕಿಗೆ ಬಂದಿದೆ, ಯುವಕನ ಜಾಡು ಹಿಡಿದ ಪೊಲೀಸರು ಆತ ಇರುವ ಪ್ರದೇಶವನ್ನು ಪತ್ತೆ ಹಚ್ಚಿ ಯುವಕನನ್ನು ವಶಕ್ಕೆ ಪಡೆದು ಕೃತ್ಯದ ಕುರಿತು ಬಾಯಿ ಬಿಡಿಸಿದಾಗ ಯುವಕ ಪ್ರೀತಿಯ ವಿಚಾರ ಹೇಳಿದ್ದಾನೆ.
ಏನಿದು ಲವ್ ಸ್ಟೋರಿ :
ಇಂದೋರ್ ಜಿಲ್ಲೆಯ ಸ್ವರ್ಣ್ ಬಾಗ್ ಕಾಲೋನಿಯಲ್ಲಿರುವ ಎರಡು ಅಂತಸ್ತಿನ ಕಟ್ಟದಲ್ಲಿರುವ ಯುವತಿಯನ್ನು ಶುಭಂ ದೀಕ್ಷಿತ್ ಎಂಬ ಯುವಕ ಪ್ರೀತಿಸುತ್ತಿದ್ದ ಎನ್ನಲಾಗಿದೆ ಆದರೆ ಆ ಯುವತಿಗೆ ಮನೆಯವರು ಬೇರೆ ಯುವಕನೊಂದಿಗೆ ಮದುವೆ ನಿಶ್ಚಯ ಮಾಡಿದ್ದರು ಎನ್ನಲಾಗಿದೆ ಈ ವಿಚಾರ ತಿಳಿದ ಯುವಕ ಸಿಟ್ಟಿನಲ್ಲಿ ತಾನು ಪ್ರೀತಿಸಿದ ಯುವತಿಯ ಸ್ಕೂಟರಿಗೆ ಬೆಂಕಿ ಹಚ್ಚಿದ್ದಾನೆ ಈ ಬೆಂಕಿ ಪಕ್ಕದಲ್ಲಿದ್ದ ಕಟ್ಟಡಕ್ಕೂ ವ್ಯಾಪಿಸಿ ಏಳು ಮಂದಿಯ ಜೀವವನ್ನೇ ಕಳೆದುಕೊಳ್ಳುವಂತೆ ಮಾಡಿತು.
ಇದನ್ನೂ ಓದಿ : ನೆಲದ ಮೇಲೆ ಮಲಗಿದ ಮಹಿಳೆಯರು: ಸರ್ಕಾರಿ ಆಸ್ಪತ್ರೆ ವಿರುದ್ಧ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್