![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಜೀಪ್ಗೆ ಗುರಾಣಿಯಾದ ಯುವಕ
Team Udayavani, Apr 15, 2017, 3:50 AM IST
![14-PTII-1.jpg](https://www.udayavani.com/wp-content/uploads/2017/04/14/14-PTII-1.jpg)
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಯುವಕರ ಗುಂಪೊಂದು ಸಿಆರ್ಪಿಎಫ್ ಯೋಧರನ್ನು ಪೀಡಿಸಿ, ಅವಮಾನಿಸಿದ ವೀಡಿಯೋ ವೈರಲ್ ಆದ ಬೆನ್ನಲ್ಲೇ, ಶ್ರೀನಗರ ಲೋಕಸಭೆ ಚುನಾವಣೆ ದಿನ ಸೇನಾ ಪಡೆಯ ಜೀಪ್ ಮುಂಭಾಗ ಯುವಕನೊಬ್ಬನನ್ನು ಕೂರಿಸಿ, ಕಟ್ಟಿಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಕಾಶ್ಮೀರದ ಬುಡಗಾಂ ಜಿಲ್ಲೆಯ ಬೀರಾವಾಹ್ ಗ್ರಾಮದಲ್ಲಿ ಸಾಗುತ್ತಿದ್ದ ಸೇನಾ ವಾಹನಗಳ ಮುಂಚುಣಿಯಲ್ಲಿದ್ದ ಜೀಪ್ ಮುಂಭಾಗದಲ್ಲಿ ಯುವಕನೊಬ್ಬನನ್ನು ಹಗ್ಗದಿಂದ ಕಟ್ಟಲಾಗಿತ್ತು. ಗ್ರಾಮಸ್ಥರ ಕಲ್ಲು ತೂರಾಟಕ್ಕೆ ಪ್ರತಿಯಾಗಿ ಆ ಯುವಕನನ್ನು “ಮಾನವ ಗುರಾಣಿ’ ರೀತಿ ಬಳಸಲಾಗಿರುವ ವೀಡಿಯೋ ಎಲ್ಲೆಡೆ ದೊಡ್ಡ ಸುದ್ದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಮ್ಮು- ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ, ಇತ್ತೀಚೆಗೆ ನಡೆದ ಎರಡೂ ಘಟನೆಗಳು “ಆಘಾತಕಾರಿ’ ಹಾಗೂ “ಅನಿರೀಕ್ಷಿತ’ ವಿದ್ಯಮಾನ ಎಂದಿದ್ದಾರೆ. ಜತೆಗೆ, ಈ ಕುರಿತು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ವಿಸ್ತೃತ ವರದಿ ನೀಡಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ “ಘಟನೆ ಅಚ್ಚರಿ ಹುಟ್ಟಿಸಿದೆ. ಈ ಬಗ್ಗೆ ತನಿಖೆ ನಡೆಸಬೇಕು,” ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್ಅಬ್ದುಲ್ಲಾ ಹೇಳಿದ್ದಾರೆ.
ಬಾಲಿವುಡ್ ಖಂಡನೆ: ಜಮ್ಮು-ಕಾಶ್ಮೀರದ ಚಡೂರದಲ್ಲಿ ಸಿಆರ್ಪಿಎಫ್ ಯೋಧರನ್ನು ಕೀಳಾಗಿ ನಡೆಸಿಕೊಂಡ ಘಟನೆಯನ್ನು ಬಾಲಿವುಡ್ ನಟರಾದ ಅನುಪಮ್ ಖೇರ್, ಫರ್ಹಾನ್ ಅಖ್ತರ್, ರಣದೀಪ್ ಹೂಡಾ, ಬಹುಭಾಷಾ ನಟ ಕಮಲ್ ಹಾಸನ್ ಸೇರಿ ಹಲವು ನಟರು ಖಂಡಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.