ಜಮ್ಮು-ಕಾಶ್ಮೀರ; 10ಗಂಟೆಗಳ ಸೇನಾ ಕಾರ್ಯಾಚರಣೆ ಅಂತ್ಯ, ಮೂವರು ಉಗ್ರರ ಹತ್ಯೆ
Team Udayavani, Sep 28, 2019, 5:08 PM IST
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ರಂಬಾನ್ ಜಿಲ್ಲೆಯ ಬಾಟೋಟೆ ನಗರದ ಮನೆಯೊಂದರಲ್ಲಿ ಮಾಲೀಕನನ್ನು ಒತ್ತೆಯಾಳುವನ್ನಾಗಿ ಇರಿಸಿಕೊಂಡಿದ್ದ ಉಗ್ರರ ವಿರುದ್ಧ ಸತತ ಹತ್ತು ಗಂಟೆಗಳ ಕಾಲ ಸೇನಾಪಡೆ ಕಾರ್ಯಾಚರಣೆ ನಡೆಸುವ ಮೂಲಕ ಮೂವರು ಉಗ್ರರನ್ನು ಹತ್ಯೆಗೈದಿದ್ದು, ಒತ್ತೆಯಾಳನ್ನು ಸುರಕ್ಷಿತವಾಗಿ ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಂಬಾನ್ ನ ಬಾಟೋಟೆ ಪ್ರದೇಶದಲ್ಲಿನ ಮನೆಯೊಳಕ್ಕೆ ನುಗ್ಗಿದ್ದ ಮೂವರು ಉಗ್ರರು, ಮನೆಯಲ್ಲಿದ್ದ ಮಾಲೀಕನನ್ನು ಒತ್ತೆಯಾಳುವನ್ನಾಗಿ ಇಟ್ಟುಕೊಂಡು, ಗುಂಡಿನ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಸೇನೆ ಪ್ರತಿದಾಳಿ ಮೂಲಕ ಕಾರ್ಯಾಚರಣೆ ನಡೆಸಿತ್ತು.
ಸತತ ಹತ್ತು ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ. ಈ ಸಂದರ್ಭದಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಇಬ್ಬರು ಯೋಧರು ಗಾಯಗೊಂಡಿರುವುದಾಗಿ ಜಮ್ಮು ಇನ್ಸ್ ಪೆಕ್ಟರ್ ಜನರಲ್ ಮುಕೇಶ್ ಸಿಂಗ್ ತಿಳಿಸಿದ್ದಾರೆ.
ಉಳಿದ ಇಬ್ಬರು ಉಗ್ರರು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
#UPDATE Jammu Inspector General of police (IG) Mukesh Singh: Three terrorists have been eliminated in Batote town of Ramban district of Jammu Zone. https://t.co/7Pd40KS6Sn
— ANI (@ANI) September 28, 2019
ಶನಿವಾರ ಬೆಳಗ್ಗೆ ಹೈವೇ ಟೌನ್ ನಲ್ಲಿ ಸೇನಾ ವಾಹನದ ಮೇಲೆ ಗ್ರೆನೇಡ್ ದಾಳಿ ನಡೆಸಿದ ಬಳಿಕ ಕೂಂಬಿಂಗ್ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ ಮೂವರು ಉಗ್ರರು ಮನೆಯೊಳಗೆ ಹೋಗಿ ಪರಾರಿಯಾಗಲು ಯತ್ನಿಸಿದ್ದರು. ಆದರೆ ಸೇನೆಯ ಕಾರ್ಯಾಚರಣೆಯಲ್ಲಿ ಮೂವರು ಸಾವನ್ನಪ್ಪಿದ್ದು, ಕಾರ್ಯಾಚರಣೆ ಪೂರ್ಣಗೊಂಡಿದೆ. ಒತ್ತೆಯಾಳನ್ನು ರಕ್ಷಿಸಲಾಗಿದೆ ಎಂದು ಸಿಂಗ್ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು