ಜಮ್ಮು-ಕಾಶ್ಮೀರ: ಮೊದಲ ಹಂತದ ಡಿಡಿಸಿ, ಪಂಚಾಯತ್ ಉಪಚುನಾವಣೆ ಮತದಾನ ಅಂತ್ಯ

ಮೊದಲ ಹಂತದ ಚುನಾವಣೆಗಾಗಿ 2,146 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು

Team Udayavani, Nov 28, 2020, 2:57 PM IST

ಜಮ್ಮು-ಕಾಶ್ಮೀರ: ಮೊದಲ ಹಂತದ ಡಿಡಿಸಿ, ಪಂಚಾಯತ್ ಉಪಚುನಾವಣೆ ಮತದಾನ ಅಂತ್ಯ

ನವದೆಹಲಿ: ಕೇಂದ್ರಾಡಳಿತ ಜಮ್ಮು ಮತ್ತು ಕಾಶ್ಮೀರದ ಮೊದಲ ಹಂತದ ಡಿಡಿಸಿ(ಜಿಲ್ಲಾ ಅಭಿವೃದ್ಧಿ ಮಂಡಳಿ) ಮತ್ತು ಪಂಚಾಯತ್ ಉಪ ಚುನಾವಣೆ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿರುವುದಾಗಿ ವರದಿ ತಿಳಿಸಿದೆ. ವಿವಿಧ ಮತಗಟ್ಟೆಯಲ್ಲಿ ಬೆಳಗ್ಗೆ 7ಗಂಟೆಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 2ಗಂಟೆಗೆ ಮುಕ್ತಾಯವಾಗಿರುವುದಾಗಿ ಚುನಾವಣಾ ಆಯೋಗದ ಮೂಲಗಳು ಹೇಳಿದೆ.

ಕೇಂದ್ರಾಡಳಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದಿನಿಂದ ಎಂಟು ಹಂತಗಳ ಜಿಲ್ಲಾ ಅಭಿವೃದ್ಧಿ ಸಂಸ್ಥೆಗಳ (ಡಿಡಿಸಿ) ಚುನಾವಣೆ ನಡೆಯಲಿದ್ದು,  2019 ಆ.5ರಂದು ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಮತ್ತು ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆ ಮಾಡಿದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿದೆ.

ಡಿಡಿಸಿ(ಜಿಲ್ಲಾ ಅಭಿವೃದ್ಧಿ ಸಂಸ್ಥೆಗಳ) ಮೊದಲ ಹಂತದ ಚುನಾವಣೆಗಾಗಿ 2,146 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು ಎಂದು ರಾಜ್ಯ ಚುನಾವಣಾಧಿಕಾರಿ ಕೆಕೆ ಶರ್ಮಾ ತಿಳಿಸಿದ್ದಾರೆ.

ಚುನಾವಣೆಯಿಂದ ಕೆಲವು ಅಭಿವೃದ್ಧಿ ಕಾರ್ಯ ನಡೆಯಲಿದೆ ಎಂಬ ವಿಶ್ವಾಸ ಜನರದ್ದಾಗಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆ ಪ್ರಾಮುಖ್ಯತೆ ಪಡೆದಿದೆ. ಈ ಕಾರಣದಿಂದಾಗಿಯೇ ನಾನು ಬೆಳಗ್ಗೆಯೇ ಮತ ಚಲಾಯಿಸಿರುವುದಾಗಿ ಬಂಡಿಪೋರಾ ಜಿಲ್ಲೆಯ ಮತದಾರರೊಬ್ಬರು ಇಂಡಿಯಾ ಟುಡೆ ಟಿವಿ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ಅಧಿಕೃತ ಮಾಹಿತಿ ಪ್ರಕಾರ, ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರದಲ್ಲಿ 280 ಕ್ಷೇತ್ರಗಳಿದ್ದು, ಇದರಲ್ಲಿ ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 2ಗಂಟೆವರೆಗೆ ಮತದಾನ ನಡೆದಿದೆ. ಮೊದಲ ಹಂತದ ಡಿಡಿಸಿ ಚುನಾವಣೆಯಲ್ಲಿ ಒಟ್ಟು 296 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರಲ್ಲಿ 207 ಮಂದಿ ಪುರುಷರು, 89 ಮಹಿಳೆಯರು ಸೇರಿದ್ದಾರೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.