ಸುಳ್ಳು ಸುದ್ದಿ ಹಬ್ಬಿಸಬೇಡಿ, ಜಮ್ಮು,ಕಾಶ್ಮೀರಕ್ಕೆ ಬನ್ನಿ; ರಾಹುಲ್ ಗೆ ಗವರ್ನರ್ ಆಹ್ವಾನ
Team Udayavani, Aug 14, 2019, 10:52 AM IST
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸುಳ್ಳು ಸುದ್ದಿಯನ್ನೇ ಹರಡುತ್ತಿದ್ದಾರೆ. ಹೀಗಾಗಿ ಕಣಿವೆ ರಾಜ್ಯದಲ್ಲಿನ ನಿಜವಾದ ಪರಿಸ್ಥಿತಿ ಏನೆಂಬುದನ್ನು ತಿಳಿಯಲು ರಾಹುಲ್ ಗಾಂಧಿ ಜಮ್ಮು-ಕಾಶ್ಮೀರಕ್ಕೆ ಬರಲಿ ಎಂದು ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಆಹ್ವಾನ ನೀಡಿದ್ದರು. ಏತನ್ಮಧ್ಯೆ ಜಮ್ಮು-ಕಾಶ್ಮೀರ ಗವರ್ನರ್ ಆಹ್ವಾನ ಇದೀಗ ರಾಜಕೀಯ ವಾಕ್ಸಮರಕ್ಕೆ ನಾಂದಿ ಹಾಡಿದೆ.
ಏತನ್ಮಧ್ಯೆ ರಾಜ್ಯಪಾಲ ಮಲಿಕ್ ಆಹ್ವಾನವನ್ನು ರಾಹುಲ್ ಗಾಂಧಿ ಸ್ವೀಕರಿಸಿದ್ದು, ತಾನು ಕಣಿವೆ ರಾಜ್ಯಕ್ಕೆ ಭೇಟಿ ನೀಡುತ್ತೇನೆ. ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುವ ಸ್ವಾತಂತ್ರ್ಯವನ್ನು ರಾಜ್ಯಪಾಲರು ನೀಡಿರುವುದು ಸ್ವಾಗತ ಎಂದು ಹೇಳಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ರಾಹುಲ್ ಗಾಂಧಿಯನ್ನು ಆಹ್ವಾನಿಸಿರುವ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ಆಹ್ವಾನ ಪ್ರಾಮಾಣಿಕತೆಯಿಂದ ಕೂಡಿಲ್ಲ, ಇದೊಂದು ಪ್ರಚಾರದ ವ್ಯೂಹವಾಗಿದೆ ಎಂದು ಪಿ.ಚಿದಂಬರಂ ತಿರುಗೇಟು ನೀಡಿದ್ದಾರೆ.
ಮತ್ತೊಂದೆದೆ ವಿರೋಧ ಪಕ್ಷಗಳ ನಾಯಕರ ನಿಯೋಗ, ಡಿಯರ್ ಗವರ್ನರ್ ಮಲಿಕ್, ನಮಗೂ ಕೂಡಾ ಜಮ್ಮು-ಕಾಶ್ಮೀರ, ಲಡಾಖ್ ಗೆ ಭೇಟಿ ಕೊಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ