ಕುಲ್ಗಾಮ್ ಯೋಧ ನಾಪತ್ತೆ; ಹತ್ತಾರು ಮಂದಿಯ ವಿಚಾರಣೆ
ಕಾರ್ಯಚರಣೆ ಮುಂದುವರಿಸಿದ ಪೊಲೀಸರು
Team Udayavani, Jul 31, 2023, 8:11 PM IST
ಶ್ರೀನಗರ: ಹಬ್ಬಕ್ಕೆಂದು ಮನೆಗೆ ಬಂದು, ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಜಮ್ಮು-ಕಾಶ್ಮೀರದ ಕುಲ್ಗಾಮ್ ಮೂಲದ ಯೋಧನನ್ನು ಪತ್ತೆಹಚ್ಚಲು ಪೊಲೀಸರು ಕಾರ್ಯಚರಣೆ ಮುಂದುವರಿಸಿದ್ದಾರೆ. ಪ್ರಕರಣ ಸಬಂಧಿಸಿದಂತೆ ಹತ್ತಾರು ಮಂದಿಯನ್ನು ವಿಚಾರಣೆ ನಡೆಸಿ, ನಾಪತ್ತೆಯಾದ ಯೋಧನ ಕಾಲ್ ಡೀಟೆಲ್ಸ್ ಅನ್ನು ಪರಿಶೀಲಿಸುತ್ತಿರುವುದಾಗಿ ಹೇಳಿದ್ದಾರೆ.
ಲಡಾಖ್ ಪ್ರದೇಶದಲ್ಲಿ ನಿಯೋಜಿಸಲ್ಪಟ್ಟಿದ್ದ ಯೋಧ ಜಾವೇದ್ ಅಹ್ಮದ್ ವಾನಿ, ಈದ್ ಹಬ್ಬಕ್ಕೆಂದು ರಜೆ ಪಡೆದು ಕುಲ್ಗಾಮ್ನಲ್ಲಿರುವ ತಮ್ಮ ನಿವಾಸಕ್ಕೆ ಬಂದಿದ್ದರು. ಭಾನುವಾರ ಮತ್ತೆ ಸೇವೆಗೆ ಹಾಜರಾಗಬೇಕಿತ್ತು. ಆದರೆ ಶನಿವಾರ ಸಂಜೆ ಮಾರುಕಟ್ಟೆಗೆಂದು ಕಾರಲ್ಲಿ ತೆರಳಿದ್ದವರು ಮರಳಿ ಬರಲೇ ಇಲ್ಲ.ಕಾರು ಪತ್ತೆಯಾಗಿದ್ದು, ಯೋಧ ನಾಪತ್ತೆಯಾಗಿದ್ದಾರೆ.
ಉಗ್ರರು ಅವರನ್ನು ಅಪಹರಿಸಿರುವ ಶಂಕೆಯ ಮೇರೆಗೆ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಏತನ್ಮಧ್ಯೆ ವಾನಿ ಅವರ ತಂದೆ ಕೂಡ ವಿಡಿಯೋ ಮೂಲಕ ಮನವಿ ಮಾಡಿ, ಯಾರೇ ತನ್ನ ಮಗನನ್ನು ಅಪಹರಿಸಿದ್ದರೂ, ಆತನನ್ನು ಜೀವಂತವಾಗಿ ಬಿಡುಗಡೆಗೊಳಿಸಿ, ಅವನಿಂದ ಸಮಸ್ಯೆಯಾಗಿದ್ದರೆ ಅದಕ್ಕೆ ನಾನು ಕ್ಷಮೆಯಾಚಿಸುತ್ತೇನೆ. ನಮ್ಮ ಕುಟುಂಬಕ್ಕೆ ಅವನೊಬ್ಬನೇ ಆಧಾರವೆಂದು ಕಣ್ಣೀರು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು