ಕಾಶ್ಮೀರದ ಶೋಪಿಯಾನ್ನಲ್ಲಿ ಉಗ್ರರ ದಾಳಿ: ಕಾಶ್ಮೀರ ಪಂಡಿತನ ಮೇಲೆ ಫೈರಿಂಗ್
Team Udayavani, Apr 5, 2022, 7:55 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡು ಹಾರಾಟ ನಡೆಸಿದ್ದಾರೆ. ಶೋಪಿಯಾನ್ ಜಿಲ್ಲೆಯ ಛೋಟಿಗಾಮ್ನಲ್ಲಿ ಬಾಲಕೃಷ್ಣ ಅಲಿಯಾಸ್ ಸೋನು (35) ಎಂಬುವರ ಮೇಲೆ ಗುಂಡು ಹಾರಿಸಲಾಗಿದೆ. ಅವರು ಸಣ್ಣ ಅಂಗಡಿ ಯೊಂದರ ಮಾಲಕರಾಗಿದ್ದಾರೆ. ಗಾಯ ಗೊಂಡ ಅವರನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಯೋಧ ಹುತಾತ್ಮ: ಶ್ರೀನಗರದ ಮೈಸು ಮಾ ಎಂಬಲ್ಲಿ ಸಿಆರ್ಪಿಎಫ್ ಯೋಧ ರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧ ರೊಬ್ಬರು ಹುತಾತ್ಮರಾಗಿದ್ದಾರೆ. ಮತ್ತೂಬ್ಬರಿಗೆ ಶ್ರೀನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳವನ್ನು ಸಿಆರ್ಪಿಫ್ ಯೋಧರು ಸುತ್ತುವರಿದಿದ್ದು ಶೋಧ ಕಾರ್ಯ ನಡೆಸಿದ್ದಾರೆ.
ಕಾರ್ಮಿಕರಿಗೆ ಗಾಯ: ಪುಲ್ವಾಮಾ ಜಿಲ್ಲೆಯಲ್ಲಿ ಬಿಹಾರದಿಂದ ಕೂಲಿ ಕೆಲಸ ಕ್ಕಾಗಿ ಬಂದಿದ್ದ ಇಬ್ಬರು ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡು ಹಾರಿಸಿದ್ದಾರೆ. ಇದರಿಂದಾಗಿ ಅವರು ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗು ತ್ತದೆ. ರವಿವಾರ ಪಂಜಾಬ್ನ ಕಾರ್ಮಿ ಕ ರಿಬ್ಬರು ಗುಂಡೇಟಿನಿಂದ ಗಾಯ ಗೊಂಡಿದ್ದರು.
ಇದನ್ನೂ ಓದಿ:ವಂಚನೆ ಪ್ರಕರಣ: ಮತ್ತೆ ಸುಕೇಶ್ ಚಂದ್ರಶೇಖರ್ ಬಂಧನ
ಇನ್ನೊಂದೆಡೆ, ರಜೌರಿ ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಎಲ್ಒಸಿ ಮೂಲಕ ಒಳನುಸುಳಲು ಪ್ರಯತ್ನ ಮಾಡಿದ ಪಾಕ್ ಪ್ರೇರಿತ ಉಗ್ರನನ್ನು ಸೇನಾ ಪಡೆಗಳು ಕೊಂದು ಹಾಕಿವೆ. ಈ ನಡುವೆ, ಮತ್ತೊಂದೆಡೆ, ಪೂಂಛ ಜಿಲ್ಲೆಯಲ್ಲಿ ಉಗ್ರರ ಅಡಗುತಾಣವನ್ನು ಸೇನಾ ಪಡೆ ಪತ್ತೆ ಮಾಡಿದೆ. ಈ ತಾಣ ಕೂಡ ಎಲ್ಒಸಿಗೆ ಹೊಂದಿಕೊಂಡಿದೆ. ಅಲ್ಲಿಂದ 2 ಎಕೆ -47 ರೈಫಲ್ಗಳು, 20 ಸುತ್ತಿನಷ್ಟು ಗುಂಡು ಮತ್ತಿತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು