ಮರದ ರಕ್ಷಣೆಗೆ ಮುಂದಾದ ಯುವತಿಯನ್ನೇ ಜೀವಂತವಾಗಿ ಸುಟ್ಟರು!
Team Udayavani, Mar 27, 2017, 3:54 PM IST
ರಾಜಸ್ತಾನ್: ಮರ ಕಡಿಯಲು ವಿರೋಧ ವ್ಯಕ್ತಪಡಿಸಿ, ಮರದ ರಕ್ಷಣೆಗೆ ಮುಂದಾಗಿದ್ದ 20 ವರ್ಷದ ಯುವತಿಯನ್ನು ಸಜೀವವಾಗಿ ಸುಟ್ಟುಹಾಕಿದ ಭೀಕರ ಘಟನೆ ರಾಜಸ್ಥಾನದ ಜೋಧ್ ಪುರ್ ಜಿಲ್ಲೆಯಲ್ಲಿ ನಡೆದಿದೆ.
ರಸ್ತೆ ನಿರ್ಮಾಣದ ಹಿನ್ನೆಲೆಯಲ್ಲಿ ತೋಟದಲ್ಲಿನ ಮರ ಕಡಿಯುತ್ತಿರುವುದನ್ನು ತೀವ್ರವಾಗಿ ವಿರೋಧಿಸಿದ್ದ ಲಲಿತಾ(20ವರ್ಷ) ಎಂಬಾಕೆಯನ್ನು ಜೀವಂತವಾಗಿ ಸುಟ್ಟುಹಾಕಿರುವ ಪ್ರಕರಣ ಭಾನುವಾರ ನಡೆದಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
ಮರ ಕಡಿಯುವುದನ್ನು ವಿರೋಧಿಸಿದ್ದಕ್ಕೆ ಲಲಿತಾ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋದ ಪರಿಣಾಮ ಗ್ರಾಮಸ್ಥರು ಯುವತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವುದಾಗಿ ವರದಿ ತಿಳಿಸಿದೆ.
ಕೂಡಲೇ ಯುವತಿಯನ್ನು ಆಸ್ಪತ್ರೆಗೆ ಸಾಗಿಸಿದರೂ ಕೂಡಾ ಆಕೆಯ ಪ್ರಾಣ ಹೋಗಿರುವುದಾಗಿ ವೈದ್ಯರು ಘೋಷಿಸಿದ್ದರು. ಕೆಲವು ವರದಿ ಪ್ರಕಾರ, ಈ ಘಟನೆಯಲ್ಲಿ ಗ್ರಾಮದ ಮುಖ್ಯಸ್ಥ(ಸರ್ ಪಂಚ್) ಶಾಮೀಲಾಗಿರುವುದಾಗಿ ಹೇಳಿದೆ.
ಸರ್ ಪಂಚ್ ಹಾಗೂ ಇತರರು ಆಕೆ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿರುವುದಾಗಿ ತಿಳಿಸಿದೆ. ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಪೊಲೀಸ್ ಅಧಿಕಾರಿ ಸುರೇಶ್ ಚೌಧರಿ ಎಎನ್ಐ ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Housing Fraud Case: ಇಡಿ ದಾಳಿ… ಬಿಲ್ಡರ್ ಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಪಿಒಕೆಯಲ್ಲಿ ಪಾಕ್ ವಿರುದ್ಧ ಆಕ್ರೋಶ; ಪಾಕ್ ದುರಾಡಳಿತದ ವಿರುದ್ಧ ಬೀದಿಗಿಳಿದ ಜನ
South India; ಜಲಾಶಯಗಳಲ್ಲಿ ನೀರಿನ ಪ್ರಮಾಣ ಶೇ.15ಕ್ಕೆ ಇಳಿಕೆ
Congress ಜತೆ ಹೋಗಬೇಡಿ, ಅಜಿತ್, ಶಿಂಧೆ ಜತೆ ಸೇರಿ: ಪ್ರಧಾನಿ ಮೋದಿ
Coimbatore ಅಮೃತ ವಿಶ್ವವಿದ್ಯಾಪೀಠಕ್ಕೆ ಟಿಎಚ್ಇ ಏಷ್ಯಾ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Crime Followup: ಸೂರ್ಲಬ್ಬಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿ ಪೊಲೀಸ್ ವಶ
Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ
Housing Fraud Case: ಇಡಿ ದಾಳಿ… ಬಿಲ್ಡರ್ ಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ
UV Fusion: ಮೂಕಪ್ರಾಣಿಗಳ ವೇದನೆಗೆ ದನಿಯಾಗುವಿರಾ!
Daily Horoscope: ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ, ಅಕಸ್ಮಾತ್ ಧನಾಗಮ ಯೋಗ